
ಅರಸೀಕೆರೆ[ಮೇ.06]: ಇತ್ತೀಚೆಗೆ ಅರಸೀಕೆರೆ ತಾಲೂಕಿನ ಬಾಗೇಶಪುರದ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ಪೌರಾಣಿಕ ನಾಟಕದ ಉದ್ಘಾಟನೆಗೆ ತೆರಳಿದ್ದ ಶಾಸಕ ಕೆ.ಎಂ. ಶಿವಲಿಂಗೇಗೌಡರು ಗದೆಯನ್ನಿಡಿದು, ಸ್ವತಃ ಭೀಮನ ಪಾತ್ರದ ಡೈಲಾಗ್ಗಳನ್ನು ಹೊಡೆಯುವ ಮೂಲಕ ನೆರೆದಿದ್ದ ಅಭಿಮಾನಿಗಳ ಚಪ್ಪಾಳೆ ಗಿಟ್ಟಿಸಿಕೊಂಡಿದ್ದು, ಈ ವಿಡಿಯೋ ವೈರಲ್ ಆಗಿದೆ.
ನಾಟಕದ ಉದ್ಘಾಟನೆಗೆ ತೆರಳಿದ್ದ ಶಿವಲಿಂಗೇಗೌಡರಿಗೆ ಒಂದೆರಡು ಡೈಲಾಗ್ ಹೊಡೆಯುವಂತೆ ಅಭಿಮಾನಿಗಳು ಕೋರಿಕೊಂಡಿದ್ದು, ಇದರಿಂದ ಉತ್ತೇಜಿತರಾದ ಶಾಸಕರು ಗದೆಯನ್ನಿಡಿದು ಹರಳು ಉರಿದಂತೆ ಸರಾಗವಾಗಿ ನಾಟಕದ ಸಂಭಾಷಣೆಯನ್ನು ಹೇಳುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.
ಶಾಸಕರು ಹೀಗೆ ನಾಟಕದ ಡೈಲಾಗ್ಗಳನ್ನು ಹೊಡೆಯುವುದು ಇದೇ ಹೊಸತೇನಲ್ಲ. ಈ ಹಿಂದೆ ಹಲವು ಬಾರಿ ಈ ರೀತಿ ಸಂಭಾಷಣೆ ಹೇಳಿದ್ದಾರೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕಳೆದ 15 ವರ್ಷಗಳ ಹಿಂದೆ ಶಾಸಕರಾಗುವುದಕ್ಕೂ ಮುನ್ನ ಶಿವಲಿಂಗೇಗೌಡರು ಅರಸೀಕೆರೆಯ ಬಸವ ರಾಜೇಂದ್ರ ಹೈಸ್ಕೂಲ್ ಮೈದಾನದಲ್ಲಿ ನಡೆದಿದ್ದ ಮಹಾಭಾರತ ಪೌರಾಣಿಕ ನಾಟಕದಲ್ಲಿ ಭೀಮನ ಪಾತ್ರದಲ್ಲಿ ನಟಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.