
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಶತಾಯುಷಿ ಡಾ. ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನದ ಅಂಗವಾಗಿ ಇಲ್ಲಿನ ಖ್ಯಾತ ಕಲಾವಿದ ಮಂಜುನಾಥ ಹಿರೇಮಠ ಅವರು ಮರಳಿನಲ್ಲಿ ಅವರ ಕಲಾಕೃತಿಯನ್ನು ಬಿಡಿಸಿದ್ದಾರೆ.
ಕೆಲಗೇರಿಯ ತಮ್ಮ ಮನೆ ಎದುರು 9 ಅಡಿ ಎತ್ತರ ಹಾಗೂ ಎಂಟು ಅಡಿ ಅಗಲ ಮರಳಿನಲ್ಲಿ ರಂಗೋಲಿ ಪುಡಿಯನ್ನು ಬಣ್ಣವಾಗಿ ಬಳಸಿ ಮಂಜುನಾಥ್ ಅವರು ಅದ್ಭುತವಾಗಿ ಶ್ರೀಗಳ ಚಿತ್ರವನ್ನು ಬಿಡಿಸಿದ್ದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ. ಕುಟುಂಬ ಸಮೇತ ಈ ಮರಳು ಕಲಾಕೃತಿಯನ್ನು ಜನರು ವೀಕ್ಷಿಸುತ್ತಿದ್ದಾರೆ.
ಮಂಜುನಾಥ ಅವರು ಶ್ರೀಗಳಿಗೆ ಈ ಮೂಲಕ ಜನ್ಮದಿನದ ಶುಭಾಷಯಗಳನ್ನು ಕೋರಿದ್ದಲ್ಲದೇ, ಆದಷ್ಟು ಶೀಘ್ರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂಬ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.