
ನವದೆಹಲಿ(ಆ.24): ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅಕಾಲಿಕ ನಿಧನದಿಂದ ಅವರ ಕುಟುಂಬ ವಲಯ ತೀವ್ರ ದು:ಖದಲ್ಲಿದೆ. ಆದರೆ ಈ ದು:ಖಧ ಘಳಿಗೆಯಲ್ಲೂ ಜವಾಬ್ದಾರಿ ಮರೆಯದ ಜೇಟ್ಲಿ ಕುಟುಂಬ, ಅಂತ್ಯಸಂಸ್ಕಾರಕ್ಕಾಗಿ ಪ್ರಧಾನಿ ಮೋದಿ ತಮ್ಮ ವಿದೇಶ ಪ್ರವಾಸ ಮೊಟಕುಗೊಳಿಸುವುದು ಬೇಡ ಎಂದು ಮನವಿ ಮಾಡಿದೆ.
ಹೌದು, ಜಿ7 ಶೃಂಗಸಭೆ ನಿಮಿತ್ತ ಪ್ರಧಾನಿ ಮೋದಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದು, ಪ್ರಸ್ತುತ ಯುಎಇಯಲ್ಲಿದ್ದಾರೆ. ಮೋದಿ ಇಲ್ಲಿಂದ ಬಹ್ರೇನ್'ಗೆ ಪ್ರಯಾಣ ಬೆಳೆಸಬೇಕಿದ್ದು, ಜೇಟ್ಲಿ ನಿಧನದ ಹಿನ್ನೆಲೆಯಲ್ಲಿ ಅವರು ಪ್ರವಾಸ ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ.
ಇದನ್ನರಿತ ಜೇಟ್ಲಿ ಕುಟುಂಬ, ಮಹತ್ವದ ವಿದೇಶ ಪ್ರವಾಸದಲ್ಲಿರುವ ಮೋದಿ, ತಮ್ಮ ಪ್ರವಾಸ ಮೊಟಕುಗೊಳಿಸುವುದು ಬೇಡ ಎಂದು ಮನವಿ ಮಾಡಿದೆ.
ಇದು ಜೇಟ್ಲಿ ನಡೆದು ಬಂದ ದಾರಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.