ಕೇಂದ್ರ ಸಚಿವ ಅರುಣ್ ಜೇಟ್ಲಿ ಹೊಸ ಸುಳಿವು!

Published : Sep 27, 2018, 11:04 AM IST
ಕೇಂದ್ರ ಸಚಿವ ಅರುಣ್ ಜೇಟ್ಲಿ ಹೊಸ ಸುಳಿವು!

ಸಾರಾಂಶ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇದೀಗ ಹೊಸ ಸುಳಿವೊಂದನ್ನು ನೀಡಿದ್ದಾರೆ.  ಮತ್ತೆ ಖಾಸಗಿ ಸಂಸ್ಥೆಗಳಿಗೆ ಇಂಥ ಆಧಾರ್‌ ದತ್ತಾಂಶ ದೊರಕಿಸಿಕೊಡುವ ಕುರಿತು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಸುಳಿವು ನೀಡಿದ್ದಾರೆ.

ನವದೆಹಲಿ: ಖಾಸಗಿಯವರು ಆಧಾರ್‌ ದತ್ತಾಂಶ ಬಳಕೆಗೆ ಸುಪ್ರೀಂಕೋರ್ಟ್‌ ನಿಷೇಧ ಹೇರಿದ ಬೆನ್ನಲ್ಲೇ, ಮತ್ತೆ ಖಾಸಗಿ ಸಂಸ್ಥೆಗಳಿಗೆ ಇಂಥ ಆಧಾರ್‌ ದತ್ತಾಂಶ ದೊರಕಿಸಿಕೊಡುವ ಕುರಿತು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಸುಳಿವು ನೀಡಿದ್ದಾರೆ.

ಆಧಾರ್‌ ಕುರಿತು ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಜೇಟ್ಲಿ, ಕೋರ್ಟ್‌ನ ವರದಿಯನ್ನು ನಾವು ಪರಿಶೀಲಿಸುತ್ತಿದ್ದೇವೆ. ಶಾಸನಬದ್ಧ ಬೆಂಬಲ ಇಲ್ಲ ಎನ್ನುವ ಕಾರಣಕ್ಕೆ ಕೆಲವೊಂದು ಯೋಜನೆಗಳಿಗೆ ಆಧಾರ್‌ ಲಿಂಕ್‌ ಮಾಡುವುದು ಕಡ್ಡಾಯ ಅಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು ಅನ್ನಿಸುತ್ತಿದೆ. ಆದರೆ ಕೋರ್ಟ್‌ ಹೇರಿರುವ ನಿಷೇಧ ಸಾರ್ವಕಾಲಿಕ ಎಂದೇನಿಲ್ಲ. ಹೀಗಾಗಿ ಇಂಥ ವಿಷಯದಲ್ಲಿ ಏನು ಮಾಡಬಹುದು ಎಂಬುದನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಹೇಳಿದ್ದಾರೆ.

ಈ ಮೂಲಕ ಅಗತ್ಯ ಬಿದ್ದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾನೂನು ರೂಪಿಸುವ ಮೂಲಕ ಖಾಸಗಿ ಸಂಸ್ಥೆಗಳಿಗೂ ಆಧಾರ್‌ ದತ್ತಾಂಶ ಬಳಕೆಗೆ ಅವಕಾಶ ಮಾಡಿಕೊಡುವ ಸುಳಿವು ನೀಡಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ