ಆರ್ಥಿಕ ನೀತಿಗಳ ಇನ್ನಷ್ಟು ಉದಾರೀಕರಣದ ಸೂಚನೆ ನೀಡಿದ ಜೇಟ್ಲಿ

Published : Oct 14, 2016, 03:59 AM ISTUpdated : Apr 11, 2018, 12:55 PM IST
ಆರ್ಥಿಕ ನೀತಿಗಳ ಇನ್ನಷ್ಟು ಉದಾರೀಕರಣದ ಸೂಚನೆ ನೀಡಿದ ಜೇಟ್ಲಿ

ಸಾರಾಂಶ

ಆರ್ಥಿಕ ನೀತಿಗಳ ಉದಾರೀಕರಣದ ಮೂಲಕ ವಿದೇಶಿ ಹೂಡಿಕೆಯ ಪ್ರಮಾಣವು ಹೆಚ್ಚಾಗುವುದೆಂಬ ವಿಶ್ವಾಸವನ್ನು ಹಣಕಾಸು ಸಚಿವ ಻ರುಣ್ ಜೇಟ್ಲಿ ವ್ಯಕ್ತಪಡಿಸಿದ್ದಾರೆ.

ಮುಂಬೈ (ಅ.14): ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ದೇಶದ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಆರ್ಥಿಕ ನೀತಿಗಳನ್ನು ಇನ್ನಷ್ಟು ಉದಾರೀಕರಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೂಚನೆ ನೀಡಿದ್ದಾರೆ.

ಹೆಚ್ಚೆಚ್ಚು ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ತೆರಿಗೆ ನೀತಿಗಳು ಹಾಗೂ ಕ್ರಮಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ವಿಚಾರ ಸಂಕಿರಣದಲ್ಲಿ ಬ್ರಿಕ್ಸ್ ದೇಶದ ತಜ್ಞರನ್ನು ಉದ್ದೇಶಿಸಿ ಮಾತನಾಡಿದ ಜೇಟ್ಲಿ, ಸಾರ್ವಜನಿಕ ಹೂಡಿಕೆಯು ಭಾರತದ ಪ್ರಗತಿಯಲ್ಲಿ ಮುಖ್ಯ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.

ಆರ್ಥಿಕ ನೀತಿಗಳ ಉದಾರೀಕರಣದ ಮೂಲಕ ವಿದೇಶಿ ಹೂಡಿಕೆಯ ಪ್ರಮಾಣವು ಹೆಚ್ಚಾಗುವುದೆಂಬ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಮುಕ್ತ ಮಾರುಕಟ್ಟೆ ಬಗ್ಗೆ ಇರುವ ಆತಂಕಗಳು ಅಮೆರಿಕಾ ಚುನಾವಣೆಯ ಬಳಿಕ ಕಡಿಮೆಯಾಗಲಿದೆ ಎಂಬ ವಿಶ್ವಾಸವನ್ನು ಜೇಟ್ಲಿ ವ್ಯಕ್ತಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!