
ತಿರುವನಂತಪುರಂ (ಆ.06): ಕೇರಳದಲ್ಲಿ ಶಂಕಿತ ಸಿಪಿಎಂ ಕಾರ್ಯಕರ್ತರಿಂದ ಹತ್ಯೆಗೊಂಡ ಆರ್’ಎಸ್’ಎಸ್ ಕಾರ್ಯಕರ್ತ ಇ.ರಾಜೇಶ್ ಮನೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಭೇಟಿ ನೀಡಿದ್ದಾರೆ. ಇದೊಂದು ಕ್ರೂರ ಹಾಗೂ ಅನಾಗರೀಕ ಘಟನೆ ಎಂದು ಖಂಡಿಸಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ಕುಮ್ಮನಾಮ್ ರಾಜಶೇಖರನ್ ಜೊತೆ ಅರುಣ್ ಜೇಟ್ಲಿ ರಾಜೇಶ್ ಮನೆಗೆ ತೆರಳಿ ಅವರ 3 ವರ್ಷದ ಮಗ ಹಾಗೂ ಕುಟುಂಬದವರನ್ನು ಭೇಟಿ ಮಾಡಿದರು.
ಹತ್ಯೆಯಾದ ರಾಜೇಶ್ ದೇಹದಲ್ಲಿ 80 ಗಾಯಗಳಿದ್ದವು. ಇಂತಹ ಅಮಾನವೀಯ ಘಟನೆಯನ್ನು ನಾವು ಮರೆಯುವುದಿಲ್ಲ. ನಮ್ಮ ಶತ್ರು ದೇಶವು ಈ ರೀತಿ ಕ್ರೂರವಾಗಿ ವರ್ತಿಸುತ್ತಿರಲಿಲ್ಲವೇನೋ ಆದರೆ ರಾಜಕೀಯ ಪಕ್ಷ ರೀತಿ ವರ್ತಿಸಿದೆ. ನಮ್ಮ ಪಕ್ಷ ಒಗ್ಗಟ್ಟಾಗಿದೆ. ಕೇರಳದ ಬಿಜೆಪಿ ಕಾರ್ಯಕರ್ತರು ಒಬ್ಬಂಟಿಗರಲ್ಲ. ನಿಮ್ಮ ಜೊತೆ ಇಡೀ ದೇಶವೇ ಇದೆ ಎಂದು ಜೇಟ್ಲಿ ರಾಜೇಶ್ ನಿವಾಸದಲ್ಲಿ ಹೇಳಿದ್ದಾರೆ.
ಕೇರಳದಲ್ಲಿ ಸರಣಿ ಹಿಂಸಾಚಾರಗಳು, ಹತ್ಯೆಗಳು ನಡೆಯುತ್ತಿದ್ದರೂ ಸಂಪೂರ್ಣ ಮೌನ ವಹಿಸಿದ ಪಿನರಾಯಿ ವಿಜಯನ್ ನೇತೃತ್ವದ ಸರ್ಕಾರದ ನಡೆಯನ್ನು ಜೇಟ್ಲಿ ಪ್ರಶ್ನಿಸಿದ್ದಾರೆ. ಇಂತಹ ಅಮಾನವೀಯ ಘಟನೆಯನ್ನು ಬೇರೆ ಯಾವುದೇ ರಾಜಕೀಯ ಪಕ್ಷಗಳು ಮಾಡಿದ್ದರೆ ಪ್ರತಿಕ್ರಿಯೆ ಕೊಡುತ್ತಿದ್ದವರು ಈಗ್ಯಾಕೆ ಮೌನ ತಾಳಿದ್ದಾರೆ ಎಂದು ತೀವ್ರವಾಗಿ ಖಂಡಿಸಿದ್ಧಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.