
ಹೊಸದಿಲ್ಲಿ: 10 ಕೋಟಿ ರೂ. ಮೌಲ್ಯದ ಮಾನನಷ್ಟ ಮೊಕದ್ದಮೆ ಹಿಂಪಡೆಯುವಂತೆ ಆಗ್ರಹಿಸಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ಇದೀಗ ಒಬ್ಬೊಬ್ಬರ ಕ್ಷಮೆಯಾಚಿಸುತ್ತಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಕ್ಷಮೆಯನ್ನೂ ಯಾಚಿಸಿದ್ದಾರೆ.
ಕೇಜ್ರಿವಾಲ್ ಅವರೊಂದಿಗೆ ಆಮ್ ಆದ್ಮಿ ಪಕ್ಷದವರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ ಮತ್ತು ಅಶುತೋಶ್ ಸಹ ಜೇಟ್ಲಿ ಕ್ಷಮೆಯಾಚಿಸಿದ್ದಾರೆ. ಈ ನಾಲ್ವರೂ ಜಂಟಿ ಪತ್ರ ಪರೆದಿದ್ದಾರೆ.
ಅರುಣ್ ಜೇಟ್ಲಿ ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಘಟನೆಯ ಅಧ್ಯಕ್ಷರಾಗಿದ್ದಾಗ ಅಪಾರ ಮೊತ್ತದ ಅವ್ಯವಹಾರ ನಡೆಸಿದ್ದರೆಂದು ಕೇಜ್ರಿವಾಲ್ ಸೇರಿ ಇತರರು ಆರೋಪಿಸಿದ್ದರು. ಇದೀಗ ಈ ಆರೋಪ ಸತ್ಯಕ್ಕೆ ದೂರವಾಗಿದ್ದು, ಆರೋಪಿಸಿದ್ದಕ್ಕೆ ಕ್ಷಮೆಯಾಚಿಸಿದ್ದಾರೆ. ಇವರ ವಿರುದ್ಧ ಹಾಕಿರುವ ಮಾನನಷ್ಟ ಪ್ರಕರಣವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.
ಹಲವರ ವಿರುದ್ಧ ಕೇಜ್ರಿವಾಲ್ ಆರೋಪಗೈದಿದ್ದು, ಇದೀಗ ಒಬ್ಬರಾದ ನಂತರ ಮತ್ತೊಬ್ಬರ ಕ್ಷಮೆಯಾಚಿಸುತ್ತಿದ್ದಾರೆ. ಈ ಮೊದಲು ಕೇಂದ್ರ ಸಚಿವ ನಿತಿನ್ ಗಡ್ಕರಿ, ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಹಾಗೂ ಅಕಾಲಿ ದಳ ನಾಯಕ ಬಿಕ್ರಿಮ್ ಸಿಂಗ್ ಮುಜಿತಿಯಾ ಅವರಿಂದೂ ಕ್ಷಮೆಯಾಚಿಸಿದ್ದು, ಮಾನನಷ್ಟ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.