
ನವದೆಹಲಿ: ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ದೊರಕಿಸಲು ಹೋರಾಟ ಆರಂಭಿಸಿರುವ ಆಮ್ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಇದೀಗ ಕೇಂದ್ರದಲ್ಲಿ ಅಧಿಕಾರಾರೂಢ ಬಿಜೆಪಿ ಸರ್ಕಾರಕ್ಕೆ ಭರ್ಜರಿ ಆಫರ್ ನೀಡಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಿಜೆಪಿ ಪರ ಪ್ರಚಾರ ನಡೆಸಲಿದೆ ಎಂದು ಘೋಷಿಸಿದ್ದಾರೆ. ಅದಕ್ಕೆ ಅವರು ಇದಕ್ಕಾಗಿ ಒಂದು ಷರತ್ತು ಮುಂದಿಟ್ಟಿದ್ದಾರೆ. ಅದೇನೆಂದರೆ 2019ರ ಲೋಕಸಭಾ ಚುನಾವಣೆಗೂ ಮುನ್ನ ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂಬುದು.
ಸೋಮವಾರ ವಿಧಾನಸಭೆಯಲ್ಲಿ ಪ್ರತ್ಯೇಕ ರಾಜ್ಯ ಬೇಡಿಕೆ ಕುರಿತು ಮಾತನಾಡಿದ ಕೇಜ್ರಿ, 2014ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವುದಾಗಿ ಮೋದಿ ಘೋಷಿಸಿದ್ದರು. ಆದರೆ ನಂತರದ ದಿನಗಳಲ್ಲಿ ಮೋದಿ ಅವರಿಗೆ ತಮ್ಮ ಭರವಸೆ ಮರೆತು ಹೋಯಿತು. ಆದರೆ ಈಗಲೂ ಕಾಲ ಮಿಂಚಿಲ್ಲ.
2019ರ ಲೋಕಸಭಾ ಚುನಾವಣೆಗೆ ಮುನ್ನ ಪ್ರಧಾನಿ ಮೋದಿ, ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡಲಿ. ನಾವು ಬಿಜೆಪಿ ಪರ ಪ್ರಚಾರಕ್ಕೆ ಸಿದ್ಧ. ಇಲ್ಲದೇ ಹೋದಲ್ಲಿ ಬಿಜೆಪಿ, ದೆಹಲಿ ಬಿಡಿ ಎಂಬ ಆಂದೋಲನ ಆರಂಭಿಸಲಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.