
ನವದೆಹಲಿ (ಏ.07): ವಿ.ಕೆ ಶುಂಗ್ಲು ವರದಿಯಿಂದ ನನಗೆ ಬಹಳ ನೋವಾಗಿದೆ ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕಾರದಲ್ಲಿ ಎಲ್ಲಾ ಸಿದ್ಧಾಂತಗಳನ್ನು ಗಾಳಿಗೆ ತೂರಿದ್ದಾರೆ ಎಂದು ಅಣ್ಣಾ ಹಜಾರೆ ದೋಷಾರೋಪಣೆ ಮಾಡಿದ್ದಾರೆ.
ಕಾನೂನು ಹಾಗೂ ಸಂವಿಧಾನವನ್ನು ಉಲ್ಲಂಘಿಸಿದ ಅರವಿಂದ್ ಕೇಜ್ರಿವಾಲ್ ರನ್ನು ಕಟುವಾಗಿ ಖಂಡಿಸುತ್ತಾ, ಅವರಿಗೆ ನಾನು ಖಡಾಖಂಡಿತವಾಗಿ ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ನನ್ನೆಲ್ಲಾ ನಿರೀಕ್ಷೆಗಳನ್ನು ಕೇಜ್ರಿವಾಲ್ ಹುಸಿಗೊಳಿಸಿದ್ದಾರೆ.
ಶುಂಗ್ಲು ಸಮಿತಿ ವರದಿಯಿಂದ ನನಗೆ ನೋವಾಗಿದೆ. ಯಾಕೆಂದರೆ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವಾಗ ಅರವಿಂದ್ ಕೇಜ್ರಿವಾಲ್ ನನ್ನ ಜೊತೆಯಿದ್ದರು. ಯುವ ಹಾಗೂ ಸುಶಿಕ್ಷಿತ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುತ್ತಾರೆಂಬ ನಿರೀಕ್ಷೆಯಿತ್ತು. ಆದರೆ ನನ್ನೆಲ್ಲಾ ನಿರೀಕ್ಷೆಗಳನ್ನು ಇವರು ಹುಸಿಗೊಳಿಸಿದ್ದಾರೆ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಕಾನೂನನ್ನು ಉಲ್ಲಂಘಿಸಿರುವ ದೆಹಲಿ ಸರ್ಕಾರವನ್ನು ನಾನು ಬೆಂಬಲಿಸುವುದಿಲ್ಲ. ಇಂತಹ ನಡೆ ದೇಶ ಹಾಗೂ ಸಮಾಜವನ್ನು ದುರ್ಬಲಗೊಳಿಸುತ್ತದೆ. ಕೇಜ್ರಿ ಮುಖ್ಯಮಂತ್ರಿಯಾದ ನಾನವರನ್ನು ಭೇಟಿ ಮಾಡುವ ಿರಾದೆಯನ್ನೇ ಇಟ್ಟುಕೊಂಡಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.