ಮಾಜಿ ಆರ್'ಬಿಐ ಗವರ್ನರ್ ರಾಜನ್'ಗೆ ರಾಜ್ಯಸಭಾ ಸ್ಥಾನದ ಆಫರ್

Published : Nov 08, 2017, 06:57 PM ISTUpdated : Apr 11, 2018, 01:05 PM IST
ಮಾಜಿ ಆರ್'ಬಿಐ ಗವರ್ನರ್ ರಾಜನ್'ಗೆ ರಾಜ್ಯಸಭಾ ಸ್ಥಾನದ ಆಫರ್

ಸಾರಾಂಶ

ಸೆ.04, 2013ರಿಂದ ಸೆ.04 2016ರವರೆಗೆ ಆರ್'ಬಿಐ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ ನಂತರ ಅಮೆರಿಕಾದ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನವದೆಹಲಿ(ನ.08):ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರು ಮಾಜಿ ಆರ್'ಬಿಐ ಗವರ್ನರ್ ರಘುರಾಂ ರಾಜನ್ ಅವರಿಗೆ ರಾಜ್ಯಸಭಾ ಸ್ಥಾನ ನೀಡುವ ಆಫರ್ ನೀಡಿದ್ದಾರೆ.

ಸೆ.04, 2013ರಿಂದ ಸೆ.04 2016ರವರೆಗೆ ಆರ್'ಬಿಐ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ ನಂತರ ಅಮೆರಿಕಾದ ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೊಬಲ್ ಪ್ರಶಸ್ತಿಯ ಅರ್ಥಶಾಸ್ತ್ರ ವಿಭಾಗದಲ್ಲೂ  ಇವರ ಹೆಸರು ಕೇಳಿ ಬಂದಿತ್ತು. ಬಿಜೆಪಿ ಸರ್ಕಾರ ಹಾಗೂ ರಘುರಾಮ್ ಅವರಿಗೂ ತಿಕ್ಕಾಟ ಶುರುವಾಗಿತ್ತು. ಈ ಕಾರಣದಿಂದ ಕೇಂದ್ರ ಸರ್ಕಾರ ರಾಜನ್ ಅವರ ಅವಧಿಯನ್ನು ವಿಸ್ತರಿಸಿರಲಿಲ್ಲ. ಅಲ್ಲದೆ ಮಾಧ್ಯಮಗಳ ವರದಿಯ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವೈಯಕ್ತಿಕವಾಗಿ ರಾಜ್ಯಸಭಾ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ' ಎನ್ನಲಾಗಿದೆ.

ಜನವರಿಯಲ್ಲಿ ದೆಹಲಿಯಲ್ಲಿ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಅಡಳಿತರೂಢ ಅಮ್ ಆದ್ಮಿ ಪಕ್ಷಕ್ಕೆ ತಮ್ಮ ಪಕ್ಷದವರನ್ನು ಹೊರತುಪಡಿಸಿ ರಾಜಕೀಯೇತರ ಉತ್ತಮ ವ್ಯಕ್ತಿಗಳು ಬೇಕಾಗಿದ್ದಾರೆ ಎನ್ನಲಾಗಿದೆ. ರಾಜನ್ ಅವರು ಮೋದಿ ಸರ್ಕಾರದ  500, 1000 ರೂ.ಗಳ ಅಪಮೌಲ್ಯಿಕರಣವನ್ನು ವಿರೋಧಿಸಿದ್ದರು.  ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸುವ ಇಂತಹ ವ್ಯಕ್ತಿಗಳನ್ನು ಮೇಲ್ಮನೆಯಲ್ಲಿ ಕೂರಿಸಬೇಕೆನ್ನುವುದು ಅರವಿಂದ್ ಕೇಜ್ರಿವಾಲ್ ಲೆಕ್ಕಾಚಾರವೆನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು