ದೆಹಲಿಯಲ್ಲಿ ಮತ್ತೆ ಸಮ-ಬೆಸ ಆಟ ಎಂದ ಕೇಜ್ರಿ: ಹುಡುಗಾಟ ಬೇಕಿಲ್ಲ ಎಂದ ಗಡ್ಕರಿ!

Published : Sep 13, 2019, 04:35 PM IST
ದೆಹಲಿಯಲ್ಲಿ ಮತ್ತೆ ಸಮ-ಬೆಸ ಆಟ ಎಂದ ಕೇಜ್ರಿ: ಹುಡುಗಾಟ ಬೇಕಿಲ್ಲ ಎಂದ ಗಡ್ಕರಿ!

ಸಾರಾಂಶ

ವಾಯುಮಾಲಿನ್ಯ ನಿಯಂತ್ರಣಕ್ಕೆ ಮತ್ತೆ ಸಮ-ಬೆಸ ಯೋಜನೆಗೆ ಮುಂದಾದ ಕೇಜ್ರಿ| ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಪಾಯದ ಮಟ್ಟ ತಲುಪಿದ ವಾಯಮಾಲಿನ್ಯ| ಸಮ-ಬೆಸ ಯೋಜನೆಯೊಂದೇ ಪರಿಹಾರ ಎಂದ ದೆಹಲಿ ಸಿಎಂ| ಕೇಜ್ರಿವಾಲ್ ನಿರ್ಧಾರಕ್ಕೆ ಕೊಕ್ಕೆ ಹಾಕಿದ ಕೇಂದ್ರ ಸಾರಿಗೆ ಸಚಿವ| ದೆಹಲಿಗೆ ಸಮ-ಬೆಸ ಯೋಜನೆ ಬೇಕಿಲ್ಲ ಎಂದ ನಿತಿನ್ ಗಡ್ಕರಿ| ಹೊಸ ರಿಂಗ್ ರೋಡ್‌ನಿಂದ ವಾಯಮಾಲಿನ್ಯ ನಿಯಂತ್ರಣಕ್ಕೆ ಬರಲಿದೆ ಎಂದ ಗಡ್ಕರಿ|

ನವದೆಹಲಿ(ಸೆ.13): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ, ಮತ್ತೆ ಸಮ-ಬೆಸ ಸಂಖ್ಯೆ ವಾಹನ ಚಾಲನೆ ಯೋಜನೆ ಜಾರಿಗೆ ತರುವುದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ವಾಯುಮಾಲಿನ್ಯ ನಿಯಂತ್ರಣಕ್ಕೆ 7 ಅಂಶಗಳ ಕ್ರೀಯಾ ಯೋಜನೆಗೆ ದೆಹಲಿ ಸರ್ಕಾರ ಮುಂದಾಗಿದ್ದು, ಮತ್ತೆ ಸಮ-ಬೆಸ ಯೋಜನೆ ಜಾರಿಗೆ ಉತ್ಸುಕತೆ ತೋರಿದೆ. ಮುಂಬರುವ 4-15 ನವೆಂಬರ್ ಅವಧಿಗಾಗಿ ಸಮ-ಬೆಸ ಯೋಜನೆ ಜಾರಿಗೊಳಿಸುವುದಾಗಿ ಕೇಜ್ರಿ ಘೋಷಿಸಿದ್ದಾರೆ.

ಇಡೀ ದೇಶದಲ್ಲಿ ದೆಹಲಿಯೊಂದೇ ವಾಯುಮಾಲಿನ್ಯ ಪರಿಶೀಲನೆ ನಡೆಸುತ್ತಿದ್ದು, ವಾಯುಮಾಲಿನ್ಯ ತಡೆಗಟ್ಟಲು ಇದೊಂದೇ ಮಾರ್ಗ ಎಂದು ದೆಹಲಿ ಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಕೇಜ್ರಿ ಯೋಜನೆಗೆ ಕೊಕ್ಕೆ ಹಾಕಿರುವ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ದೆಹಲಿಗೆ ಸಮ-ಬೆಸ ಯೋಜನೆ ಬೇಕಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ದೆಹಲಿಯಲ್ಲಿ ನಿರ್ಮಾಣವಾಗಿರುವ ಹೊಸ ರಿಂಗ್ ರೋಡ್ ವಾಯುಮಾಲಿನ್ಯ ಸಮಸ್ಯೆಗೆ ಇತಿಶ್ರೀ ಹಾಡಲಿದ್ದು, ಮುಂಬರುವ ಮೂರು ವರ್ಷಗಳಲ್ಲಿ ದೆಹಲಿ ವಾಯುಮಾಲಿನ್ಯ ಸಮಸ್ಯೆಯಿಂದ ಮುಕ್ತವಾಗಲಿದೆ ಎಂದು ಗಡ್ಕರಿ ಭರವಸೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!