
ಲಖನೌ(ಮಾ.24): ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಅಕ್ರಮ ಕಸಾಯಿಖಾನೆ ಮುಚ್ಚುವ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಇದುವರೆಗೆ 300ಕ್ಕೂ ಅಧಿಕ ಅಕ್ರಮ ಕಸಾಯಿಖಾನೆಗಳಿಗೆ ಬೀಗಜಡಿಯಲಾಗಿದೆ.
ಇದರ ಬಿಸಿ ಬಿಜೆಪಿ ಮುಖಂಡ ಹಾಗೂ ಮಾಂಸ ವ್ಯಾಪಾರಿ ಯಾಕುಬ್ ಖುರೇಷಿ ಅವರಿಗೂ ತಟ್ಟಿದ್ದು, ಮೇರಠ್'ನಲ್ಲಿ ಯಾಕುಬ್ ಮತ್ತು ಅವರ ಕುಟುಂಬ ಹೊಂದಿರುವ ಹಲವಾರು ಮಾಂಸ ಸಂಸ್ಕರಣಾ ಘಟಕಗಳನ್ನು ಮುಚ್ಚಲಾಗಿದೆ.
ಪಶ್ಚಿಮ ಉತ್ತರ ಪ್ರದೇಶದಲ್ಲಿ ನೂರಾರು ಮಾಂಸ ಸಂಸ್ಕರಣಾ ಘಟಕಗಳಿದ್ದು, ಎಮ್ಮೆ ಮಾಂಸವನ್ನು ರಫ್ತು ಮಾಡಲಾಗುತ್ತಿದೆ. ಅನೇಕ ಮಾಂಸ ಸಂಸ್ಕರಣಾ ಘಟಕಗಳಲ್ಲಿ ಗೋ ವಧೆ ಮಾಡಲಾಗುತ್ತಿದೆ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ.
ಭಾರತದಿಂದ ರಫ್ತಾಗುವ ಮಾಂಸದಲ್ಲಿ ಉತ್ತರ ಪ್ರದೇಶ ಶೇ.34ರಷ್ಟು ಪಾಲು ಹೊಂದಿದೆ. ಇಡೀ ವಿಶ್ವದಲ್ಲಿ ಬಳಕೆಯಾಗುವ ಎಮ್ಮೆ ಮಾಂಸದ ಪೈಕಿ ಶೇ.43ರಷ್ಟು ಉತ್ತರಪ್ರದೇಶದಿಂದ ರವಾನೆಯಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.