ಬಂಗಾಳ ಸಂಸದರ ಪ್ರಮಾಣವಚನ: ಸದನದಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ!

Published : Jun 17, 2019, 06:42 PM IST
ಬಂಗಾಳ ಸಂಸದರ ಪ್ರಮಾಣವಚನ: ಸದನದಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ!

ಸಾರಾಂಶ

ಲೋಕಸಭೆಯಲ್ಲಿ ಮೊಳಗಿದ ಜೈ ಶ್ರೀರಾಮ ಘೋಷಣೆ| ಪ.ಬಂಗಾಳ ಬಿಜೆಪಿ ನೂತನ ಸಂಸದರ ಪ್ರಮಾಣವಚನ| ಬಾಭುಲ್ ಸುಪ್ರಿಯೋ ಪ್ರಮಾಣವಚನದ ವೇಳೆ ಜೈ ಶ್ರೀರಾಮ ಘೋಷಣೆ| ಬಿಜೆಪಿಯ ಇತರ ಸದಸ್ಯರಿಂದ ಜೈ ಶ್ರೀರಾಮ ಘೋಷಣೆ|

ನವದೆಹಲಿ(ಜೂ.17): 17ನೇ ಲೋಕಸಭೆಯ ಮೊದಲ ಅಧಿವೇಶನಕ್ಕೆ ಇಂದು ಅಧಿಕೃತ ಚಾಳನೆ ದೊರೆತಿದ್ದು, ಲೋಕಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸಿದರು.

ಈ ವೇಳೆ ಪ.ಬಂಗಾಳದಿಂದ ಆಯ್ಕೆಯಾಗಿರುವ ಬಿಜೆಪಿ ಸದಸ್ಯರು ಪ್ರಮಾಣವಚನ ಸ್ವೀಕರಿಸುವಾಗ, ಸದನದಲ್ಲಿ ಜೈ ಶ್ರೀರಾಮ ಘೋಷಣೆ ಮೊಳಗಿದೆ. ಪ್ರಮುಖವಾಗಿ ಪ.ಬಂಗಾಳದ ಬಿಜೆಪಿ ಸಂಸದರಾದ ಬಾಬುಲ್ ಸುಪ್ರಿಯೋ ಮತ್ತು ದೇಬಶ್ರೀ ಚೌಧರಿ ಪ್ರಮಾಣವಚನ ಸ್ವೀಕರಿಸುವಾಗ ಇತರ ಬಿಜೆಪಿ ಸದಸ್ಯರು ಜೈ ಶ್ರೀರಾಮ ಘೋಷಣೆ ಕೂಗಿದರು.

ಲೋಕಸಭೆ ಚುನಾವಣೆ ವೇಳೆ ಪ.ಬಂಗಾಳದಲ್ಲಿ ಜೈ ಶ್ರೀರಾಮ ಘೋಷಣೆ ತೀವ್ರ ವಿರೋಧ ಸೃಷ್ಟಿಸಿತ್ತು. ಈ ಘೋಷಣೆ ಕೂಗುವುದನ್ನು ತಡೆಯಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪ್ರಯತ್ನಿಸಿದ್ದರೆ, ಈ ಘೋಷಣೆಯನ್ನು ಮುಂದಿಟ್ಟುಕೊಂಡೇ ಬಿಜೆಪಿ ಚುನಾವಣೆ ಎದುರಿಸಿತ್ತು.

ಇದೇ ಮೊದಲ ಬಾರಿಗೆ ಪ.ಬಂಗಾಳದಲ್ಲಿ 18 ಸೀಟುಗಳನ್ನು ಗೆದ್ದಿರುವ ಬಿಜೆಪಿ, ರಾಜ್ಯದಲ್ಲಿ ತನ್ನ ಬೇರು ಗಟ್ಟಿಗೊಳಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಜೈ ಶ್ರೀರಾಮ ಘೋಷಣೆಯನ್ನು ಬಳಸಿಕೊಂಡ ಬಿಜೆಪಿ, ಅದರಲ್ಲಿ ಯಶಸ್ವಿಯಾಗಿರುವುದು ವಿಶೇಷ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು