ಇಂದು ಕುತೂಹಲದ ಸಂಪುಟ ಸಭೆ

Published : Jul 11, 2019, 09:23 AM IST
ಇಂದು ಕುತೂಹಲದ ಸಂಪುಟ ಸಭೆ

ಸಾರಾಂಶ

ಇಂದು ಕುತೂಹಲದ ಸಂಪುಟ ಸಭೆ| ವಿಧಾನಸಭೆ ವಿಸರ್ಜನೆಯೋ? ಎಂದಿನಂತೆ ಸಾಮಾನ್ಯ ಸಂಪುಟ ಸಭೆಯೋ?

ಬೆಂಗಳೂರು(ಜು.11): ಆಡಳಿತಾರೂಢ ಪಕ್ಷಗಳ ಶಾಸಕರ ಸರಣಿ ರಾಜೀನಾಮೆ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಳ್ಳಬಹುದು ಎಂಬ ದಟ್ಟವದಂತಿಗಳ ನಡುವೆಯೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಸಚಿವ ಸಂಪುಟ ಸಭೆ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಬೆಳಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆ ಕರೆಯುವ ಬಗ್ಗೆ ಬುಧವಾರ ಸಂಜೆ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ, ಮಹತ್ವದ ನಿರ್ಧಾರ ಕೈಗೊಳ್ಳಬಹುದು ಎಂಬ ಮಾತು ಕೇಳಿಬರುತ್ತಿದೆ. ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಧಾನಸಭೆ ವಿಸರ್ಜನೆ ಮಾಡುವ ತೀರ್ಮಾನ ಕೈಗೊಳ್ಳಬಹುದು ಎಂಬ ವದಂತಿ ಒಂದು ಕಡೆ ಇದ್ದರೆ, ಇದು ಕೊನೆಯ ಸಂಪುಟ ಸಭೆ ಆಗಬಹುದು ಎಂಬ ಕಾರಣಕ್ಕಾಗಿ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೂ ಧನ್ಯವಾದ ಸಲ್ಲಿಸುವ ಸಂಬಂಧ ಸಭೆ ಕರೆದಿರಬಹುದು ಎನ್ನಲಾಗುತ್ತಿದೆ.

ಆದರೆ ಇದನ್ನು ಸ್ಪಷ್ಟವಾಗಿ ತಳ್ಳಿ ಹಾಕಿರುವ ಮುಖ್ಯಮಂತ್ರಿಗಳ ಕಚೇರಿ ಮೂಲಗಳು, ಇದೊಂದು ಸಾಮಾನ್ಯ ಸಂಪುಟ ಸಭೆ. ಹಿಂದಿನ ಸಂಪುಟ ಸಭೆಗಳಂತೆ ಈ ಸಂಪುಟ ಸಭೆಯಲ್ಲೂ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ ಎಂದು ಸಮಜಾಯಿಷಿ ನೀಡಿವೆ.

ಕರ್ನಾಟಕ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಹತ್ವದ ಯೋಜನೆಗಳಿಗೆ ಸಂಪುಟದಲ್ಲಿ ಒಪ್ಪಿಗೆ?

ಸಮ್ಮಿಶ್ರ ಸರ್ಕಾರದ ಬುಡ ಅಲುಗಾಡುತ್ತಿರುವ ಮಧ್ಯೆಯೇ ಗುರುವಾರ ಕರೆದಿರುವ ಸಚಿವ ಸಂಪುಟ ಸಭೆಯಲ್ಲಿ ಸಹಸ್ರಾರು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅನುಮಾನ ವ್ಯಕ್ತವಾಗಿದೆ.

ಬಹುತೇಕ ಇದು ಕೊನೆಯ ಸಚಿವ ಸಂಪುಟ ಸಭೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿರುವ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷಗಳು ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯುವ ಸನ್ನಾಹದಲ್ಲಿದೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ
ಧಾರವಾಡ: ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಭೇಟಿ ಮಾಡಿಸಲು ಹೈಕೋರ್ಟ್ ಸೂಚನೆ