
ಹೈದರಾಬಾದ್(ಸೆ.16): 2019 ರ ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್ ನಿಂದ ಸ್ಪರ್ಧಿಸಲು ಅಮಿತ್ ಶಾಗೆ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ಅಮಿತ್ ಶಾ ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್ ಓವೈಸಿ, 2019 ರಲ್ಲಿ ಹೈದರಾಬಾದ್ ನಿಂದ ಸ್ಪರ್ಧಿಸಲು ಅಮಿತ್ ಶಾ ಗೆ ಸವಾಲು ಹಾಕಿದ್ದಾರೆ.
ಬಿಜೆಪಿಗೆ ತೆಲಂಗಾಣದಲ್ಲಿ ಈಗಿರುವ 4 ಸ್ಥಾನಗಳನ್ನೂ ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಓವೈಸಿ ಹೇಳಿದ್ದು, ರಾಜ್ಯದಲ್ಲಿ ಬಿಜೆಪಿ ಬಲಪಡಿಸಲು ಖುದ್ದು ಅಮಿತ್ ಶಾ ಅವರೇ ಇಲ್ಲಿಂದ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.
ತೆಲಂಗಾಣದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಸುವ ಕೆಸಿಆರ್ ನಿರ್ಧಾರವನ್ನು ಪ್ರಶ್ನಿಸಿದ್ದ ಅಮಿತ್ ಶಾಗೆ 2002 ರಲ್ಲಿ ಗುಜರಾತ್ ಗಲಭೆ ನಂತರ ಅವಧಿಗೂ ಮುನ್ನ ನಡೆದಿದ್ದ ಚುನಾವಣೆಯನ್ನು ಓವೈಸಿ ನೆನಪಿಸಿದ್ದಾರೆ. 2002 ರಲ್ಲಿ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಅವರೂ ಅವಧಿಗೂ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿದ್ದು, ಅಮಿತ್ ಶಾ ಅವರಿಗೆ ನೆನಪಿಲ್ಲವೇ ಎಂದು ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.