‘ಬಿಜೆಪಿಗೆ ತಾಕತ್ತಿದ್ರೆ ರಾಮಮಂದಿರ ನಿರ್ಮಾಣಕ್ಕೆ ಕೋರ್ಟ್​ ಆದೇಶ ತರಲಿ’

By Web DeskFirst Published Oct 29, 2018, 9:36 PM IST
Highlights

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಬಿಜೆಪಿಗೆ ಸವಾಲು ಹಾಕಿದ್ದಾರೆ. ಏನದು ಸವಾಲ್?  

ನವದೆಹಲಿ, (ಅ.29): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಧಿಕೃತವಾಗಿ ಕೋರ್ಟ್​ ಆದೇಶ ತರಲಿ ಎಂದು ಅಸಾದುದ್ದೀನ್​​​ ಓವೈಸಿ ಸವಾಲ್​​ ಹಾಕಿದ್ದಾರೆ.

ಇಂದು [ಸೋಮವಾರ] ಮಾಧ್ಯಮಗಳ ಜೊತೆ ಮಾತನಾಡಿದ ಹೈದರಬಾದ್​​ ಸಂಸದ, ಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ, ಬಿಜೆಪಿಗೆ ತಾಖತ್ತಿದ್ದರೆ ಕೋರ್ಟ್​ನಿಂದ ಮಂದಿರ ನಿರ್ಮಾಣಕ್ಕೆ ಆದೇಶ ತರಲಿ ಎಂದು ಸವಾಲ್​​ ಹಾಕಿದ್ದಾರೆ.

ಲೋಕಸಭಾ ಚುನಾವಣೆ: ಬಿಜೆಪಿ ಗೆಲ್ಲಲು ರಾಮಮಂದಿರ ನಿರ್ಮಾಣ ಅನಿವಾರ್ಯನಾ?

2019ರ ಜನವರಿಯ ವರೆಗೆ ಅಯೋಧ್ಯ ರಾಮ ಜನ್ಮಭೂಮಿ ಪ್ರಕರಣವನ್ನು ಸುಪ್ರೀಂಕೋರ್ಟ್​​ ಮುಂದೂಡಿದೆ. ಈ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. 

ಬಿಜೆಪಿ ನಾಯಕರ ಆದೇಶದಂತೆ ದೇಶ ನಡೆಯುವುದಿಲ್ಲ. ಭಾರತ ಇಲ್ಲಿನ ಸಂವಿಧಾನದ ಆಧಾರದ ಮೇಲೆ ನಡೆಯುತ್ತದೆ ಎಂದು ಓವೈಸಿ ಬಿಜೆಪಿ ವಿರುದ್ಧ ಕಿಡಿಕಾರಿದರು.

click me!