ಪ್ರಧಾನಿ ಸಂವಿಧಾನ ನೆನಪಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ: ಒವೈಸಿ ಗುಡುಗು!

Published : Sep 11, 2019, 08:55 PM IST
ಪ್ರಧಾನಿ ಸಂವಿಧಾನ ನೆನಪಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ: ಒವೈಸಿ ಗುಡುಗು!

ಸಾರಾಂಶ

ಪ್ರಧಾನಿ ವಿರುದ್ಧ ಹರಿಹಾಯ್ದ ಎಐಎಂಐಎಂ ಸಂಸದ ಅಸದುದ್ದೀನ್ ಒವೈಸಿ| ಪ್ರಧಾನಿ ಸಂವಿಧಾನ ನೆನಪಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ ಎಂದ ಒವೈಸಿ|  ಗೋ ನೀತಿ ಟೀಕಿಸುವವರು ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದಿದ್ದ ಮೋದಿ| ‘ಸಂವಿಧಾನದಲ್ಲಿ ಮಾನವರಿಗೆ ಬದುಕುವ ಹಕ್ಕು ಮತ್ತು ಸಮಾನತೆ ನೀಡಲಾಗಿದೆ’|

ನವದೆಹಲಿ(ಸೆ.11): ಗೋ ನೀತಿ ಟೀಕಿಸುವವರು ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಎಐಎಂಐಎಂ ಮುಖ್ಯಸ್ಥ, ಸಂಸದ ಅಸದುದ್ದೀನ್ ಒವೈಸಿ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ದೇಶದ ಸಂವಿಧಾನವನ್ನು ನೆನಪಿಸಿಕೊಳ್ಳುವ ವಿಶ್ವಾಸವಿದೆ ಎಂದಿರುವ ಒವೈಸಿ, ಗೋವು ನಮ್ಮ ಹಿಂದೂ ಸಹೋದರರಿಗೆ ಪವಿತ್ರ ಪ್ರಾಣಿ ಹೌದಾದರೂ ಸಂವಿಧಾನದಲ್ಲಿ ಮಾನವರಿಗೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ನೀಡಲಾಗಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಇಂದು ಮಥುರಾದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೋದಿ, ಕೆಲವರು ಓಂ ಮತ್ತು ಗೋವು ಎಂಬ ಶಬ್ದ ಕೇಳಿದ ತಕ್ಷಣ ದೇಶ 16ನೇ ಶತಮಾನಕ್ಕೆ ಮರಳಿದೆ ಎಂದು ಕಿರುಚುತ್ತಾರೆ. ಅಂತಹ ಜನರು ರಾಷ್ಟ್ರವನ್ನು ನಾಶಪಡಿಸುತ್ತಾರೆ ಎಂದು ಗುಡುಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!