ಗುಂಪು ಹಲ್ಲೆ: ಕಾನೂನು ರಚಿಸಲು ಒವೈಸಿ ಒತ್ತಾಯ!

Published : Jul 06, 2019, 09:13 PM IST
ಗುಂಪು ಹಲ್ಲೆ: ಕಾನೂನು ರಚಿಸಲು ಒವೈಸಿ ಒತ್ತಾಯ!

ಸಾರಾಂಶ

ದೇಶದಲ್ಲಿ ಹೆಚ್ಚುತ್ತಿರುವ ಗುಂಪು ಹಲ್ಲೆ ಪ್ರಕರಣಗಳು| ಕಠಿಣ ಕಾನೂನಿಗೆ ಅಸದುದ್ದೀನ್ ಒವೈಸಿ ಒತ್ತಾಯ| ಕಾನೂನು ರಚಿಸಲು ಸುಪ್ರೀಂಕೋರ್ಟ್ ಸಲಹೆ ನೀಡಿದೆ ಎಂದ ಒವೈಸಿ| ‘ಮೋದಿ ಗುಂಪು ಹಲ್ಲೆಕೋರರನ್ನು ಭಯೋತ್ಪಾದಕರು ಎಂದು ಕರೆಯಲಿ’| 

ನವದೆಹಲಿ(ಜು.06):  ದೇಶದಲ್ಲಿ ಕೋಮು ಆಧಾರಿತ ಗುಂಪು ಹಲ್ಲೆಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸಬೇಕೆಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಈಗಾಗಲೇ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಇದುವರೆಗೂ ಶಾಸನ ರಚನೆಯಾಗದಿರುವುದು ತಮಗೆ ಅಚ್ಚರಿ ತಂದಿದೆ ಎಂದು ಒವೈಸಿ ಹೇಳಿದ್ದಾರೆ.

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಗುಂಪು ಹಲ್ಲೆ ಹೆಚ್ಚುತ್ತಿದ್ದು, ಪ್ರಧಾನಿ ಹಿಂಸಾ ವಿರೋಧಿಯೇ ಆಗಿದ್ದರೆ ಹಲ್ಲೆಕೋರರನ್ನು ಭಯೋತ್ಪಾದಕರು ಎಂದು ಕರೆಯಲಿ ಒವೈಸಿ ಒತ್ತಾಯಿಸಿದ್ದಾರೆ.

ಗುಂಪು ಹಲ್ಲೆ ತಡೆಗಟ್ಟಲು ಸೂಕ್ತ ಹಾಗೂ ಕಠಿಣ ಕಾನೂನಿನ ಅವಶ್ಯಕತೆ ಇದ್ದು, ಕೂಡಲೇ ಕೇಂದ್ರ ಸರ್ಕಾರ ಈ ಕುರಿತು ಕಾನೂನು ಜಾರಿಗೊಳಿಸಬೇಕು ಎಂದು ಒವೈಸಿ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

PM Modi: ಮತ್ತೆ ದಕ್ಷಿಣದತ್ತ ಮುಖ ಮಾಡಿದ ಪ್ರಧಾನಿ: ರಾಜಕೀಯ ಮಹತ್ವ ಪಡೆದ ಮೋದಿ ನಡೆ
Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ