ಕುಕ್ಕೆ ಸುಬ್ರಮಣ್ಯ ದೇಗುಲದ ಭಕ್ತರೇ ಇಲ್ಲೊಮ್ಮೆ ಗಮನಿಸಿ

Published : Jul 01, 2018, 11:47 AM IST
ಕುಕ್ಕೆ ಸುಬ್ರಮಣ್ಯ ದೇಗುಲದ ಭಕ್ತರೇ ಇಲ್ಲೊಮ್ಮೆ ಗಮನಿಸಿ

ಸಾರಾಂಶ

ಕುಕ್ಕೆ ಸುಬ್ರಮಣ್ಯ ದೇವಾಲಯದ ಭಕ್ತರೇ ಇಲ್ಲಿ. ಗಮನಿಸಿ. ಇನ್ನುಮುಂದೆ  ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆಯಾದ ಆಶ್ಲೇಷ ಬಲಿ ಸೇವೆಯು ಸಂಜೆಯ ವೇಳೆಯೂ ಕೂಡ ನಡೆಯಲಿದೆ.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಜು.5ರಿಂದ ಸಂಜೆಯ ವೇಳೆಯೂ ಆಶ್ಲೇಷ ಬಲಿ ಸೇವೆ ಆರಂಭಗೊಳ್ಳಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಳದಲ್ಲಿ ಆಶ್ಲೇಷ ಬಲಿ ಸೇವೆಯನ್ನು ಬೆಳಗ್ಗಿನ ಸಮಯ ಮಾತ್ರ ನಡೆಸಲಾಗುತ್ತಿತ್ತು. ಆದರೆ ಸೇವೆ ನೆರವೇರಿಸುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಒತ್ತಡ ಉಂಟಾಗುತ್ತಿದೆ. 

ಇದನ್ನು ಮನಗಂಡ ದೇವಳದ ಆಡಳಿತ ಮಂಡಳಿ ಸಾಯಂಕಾಲದ ವೇಳೆಯೂ ಆಶ್ಲೇಷ ಬಲಿ ಸೇವೆ ನಡೆಸಲು ನಿರ್ಧರಿಸಿದೆ ಎಂದರು. ಸಾಯಂಕಾಲದ ಆಶ್ಲೇಷ ಬಲಿ ಸೇವೆಗೆ ಮಧ್ಯಾಹ್ನ 12.30ರಿಂದ ಸಾಯಂಕಾಲ 4.30ರವರೆಗೆ ಸೇವಾ ರಶೀದಿ ನೀಡಲಾಗುವುದು. ಸಂಜೆ 5ಕ್ಕೆ ಆಶ್ಲೇಷ ಬಲಿ ಸೇವೆ ಆರಂಭವಾಗಿ, ಒಂದು ಪಾಳಿಯಲ್ಲಿ ಮಾತ್ರ ನಡೆಯುತ್ತದೆ ಎಂದು ಹೇಳಿದರು.

ಪ್ರತಿದಿನ ಆಶ್ಲೇಷ ಬಲಿ ಸೇವೆಯ ಸುಮಾರು 400 ರಿಂದ 500 ನಡೆಯುತ್ತದೆ. ವಿಶೇಷ ಹಾಗೂ ರಜಾ ದಿನಗಳ ಸಂದರ್ಭದಲ್ಲಿ ಇದರ ಸಂಖ್ಯೆ 1200 ರಿಂದ 1400 ತಲುಪುತ್ತದೆ. ಆದಕಾರಣ ಸಂಜೆ ವೇಳೆಯೂ ಸೇವೆ ಆರಂಭಿಸಲಾಗುತ್ತಿದೆ. ಅಲ್ಲದೇ ಇದೀಗ ಸೇವೆ ನೆರವೇರುತ್ತಿರುವ ಸ್ಥಳ ಚಿಕ್ಕದಾಗಿದ್ದು, ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ. ಆದಕಾರಣ ಆಶ್ಲೇಷ ಬಲಿ ಸೇವೆಯ ಸ್ಥಳವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ