
ಬೆಂಗಳೂರು [ಆ.26]: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯ ಮಂತ್ರಿಯಾಗಿದ್ದ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದ ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ ಹಾಗೂ ಒಕ್ಕಲಿಗ ಸಮುದಾಯದ ಆರ್. ಅಶೋಕ್ ಅವರಿಗೆ ಹಿನ್ನೆಡೆ ಸಂಭವಿಸುವ ಸಾಧ್ಯತೆ ಯಿದೆ.
ಅಂದರೆ, ಈ ಮೂವರು ಈಗ ಸಚಿವರಾಗಿ ಮಾತ್ರ ಮುಂದುವರೆಯಬೇಕಾಗಿ ಬರಬಹುದು. ಇವರಿಗಿಂತ ಕಿರಿಯರು ಉಪಮುಖ್ಯಮಂತ್ರಿಗಳಾಗ ಲಿದ್ದಾರೆ. ಶೆಟ್ಟರ್ ಮತ್ತು ಈಶ್ವರಪ್ಪ ಅವರ ಬಗ್ಗೆ ಅಲ್ಲದಿದ್ದರೂ ಅಶೋಕ್ ಅವರ ಬಗ್ಗೆ ಮಾತ್ರ ಸಂಘ ಪರಿವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವರಿಷ್ಠರು ಸಂಘ ಪರಿವಾರದ ಮುಖಂಡರ ಅಭಿಪ್ರಾಯಗಳಿಗೆ ಬೆಲೆ ನೀಡುವ ಸಾಧ್ಯತೆಯಿದೆ.
ಹೀಗಾಗಿಯೇ ಒಕ್ಕಲಿಗ ಸಮುದಾಯದ ಡಾ. ಅಶ್ವತ್ಥನಾರಾಯಣ ಅವರಿಗೆ ಅವಕಾಶ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.