
ಬೀದರ್ : ನೈಸ್ ಕಂಪನಿ ಮುಖ್ಯಸ್ಥ ಅಶೋಕ್ ಖೇಣಿ ಕಳೆದ ಬಾರಿ ಕರ್ನಾಟಕ ಮಕ್ಕಳ ಪಕ್ಷ ಸ್ಥಾಪಿಸಿ, ತಾವೇ ಅಭ್ಯರ್ಥಿಯಾಗಿ ಗೆದ್ದಿದ್ದರು. ಅವರು ಈಗ ಕಾಂಗ್ರೆಸ್ ಹಾಗೂ ಬಿಜೆಪಿ ಕದ ತಟ್ಟುತ್ತಿದ್ದಾರೆಂಬ ಗಾಳಿ ಸುದ್ದಿ ಹಬ್ಬಿದೆ. 2013ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎರಡನೇ ಸ್ಥಾನ ಪಡೆದಿದ್ದ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಮತ್ತೊಮ್ಮೆ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಕಳೆದ ಬಾರಿ ಬಿಎಸ್ಪಿ ಈ ಕ್ಷೇತ್ರದಲ್ಲಿ 16 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮೂರನೇ ಸ್ಥಾನ ಪಡೆದಿತ್ತು. ಆ ಪಕ್ಷದ ಜತೆಗಿನ ಮೈತ್ರಿಯಿಂದಾಗಿ ತಮಗೆ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿ ಖಾಶೆಂಪೂರ್ ಇದ್ದಾರೆ. ಹೋದ ಬಾರಿ ಕೆಜೆಪಿ ಅಭ್ಯರ್ಥಿಯಾಗಿದ್ದ ಡಾ| ಶೈಲೇಂದ್ರ ಬೆಲ್ದಾಳೆ, ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಖೇಣಿ ಬಿಜೆಪಿ ಸೇರ್ಪಡೆಯಾದರೆ ಹಾಲಿ ಜಿಲ್ಲಾಧ್ಯಕ್ಷ ಪಟ್ಟಕ್ಕೇ ಅವರು ತೃಪ್ತಿಪಟ್ಟುಕೊಳ್ಳಬೇಕು. ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅಳಿಯ ಚಂದ್ರಸಿಂಗ್ ಕಾಂಗ್ರೆಸ್ ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ಸಂಗ್ರಾಮ್ ಕೂಡ ಪ್ರಯತ್ನಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.