ಖೇಣಿಗೆ ಕನ್ನಡ ಬರೊಲ್ವಾ? ನೈಸ್ ವರದಿ ಬಗ್ಗೆ ಉಡಾಫೆ ಉತ್ತರ ಕೊಟ್ಟ ಖೇಣಿ

Published : Jan 17, 2017, 02:16 PM ISTUpdated : Apr 11, 2018, 12:40 PM IST
ಖೇಣಿಗೆ ಕನ್ನಡ ಬರೊಲ್ವಾ? ನೈಸ್ ವರದಿ ಬಗ್ಗೆ ಉಡಾಫೆ ಉತ್ತರ ಕೊಟ್ಟ ಖೇಣಿ

ಸಾರಾಂಶ

ಪೇಪರ್'ನಲ್ಲಿ ಬಂದಿರೋದನ್ನೆಲ್ಲಾ ತಾನು ನಂಬಲ್ಲ. ಪೇಪರ್'ನಲ್ಲಿ ಬರೆದಿರುವವರೆಲ್ಲಾ ಸತ್ಯ ಹರಿಶ್ಚಂದ್ರರಾ? ಎಂದು ಅವರು ಉಡಾಫೆಯಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರು(ಜ. 17): ನೈಸ್ ಅಕ್ರಮಗಳ ಕುರಿತು ತನಿಖೆ ನಡೆಸಿದ ಸದನ ಸಮಿತಿಯು ವಿಧಾನಸಭೆಯಲ್ಲಿ ಮಂಡನೆಯಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ಕೋರಿದ ಮಾಧ್ಯಮಗಳಿಗೆ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಉಡಾಫೆ ಉತ್ತರ ನೀಡಿದ್ದಾರೆ. ಸಮಿತಿಯ ವರದಿಯನ್ನೇ ನಾ ನೋಡಿಲ್ಲ. ಅದರ ಬಗ್ಗೆ ಗೊತ್ತೇ ಇಲ್ಲ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಖೇಣಿ ಪ್ರತಿಕ್ರಿಯಿಸಿದ್ದಾರೆ.

ಸದನ ಸಮಿತಿ ವರದಿ ಕನ್ನಡದಲ್ಲಿದೆ. ನನಗೆ ಓದಲು ಕಷ್ಟವಾಗುತ್ತದೆ ಎಂದು ಅಶೋಕ್ ಖೇಣಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಪತ್ರಿಕೆಯಲ್ಲಿ ಈ ಬಗ್ಗೆ ವರದಿ ಬಂದಿದೆಯಲ್ಲಾ ಎಂದು ಕೇಳಿದ್ದಕ್ಕೆ, ಪೇಪರ್'ನಲ್ಲಿ ಬಂದಿರೋದನ್ನೆಲ್ಲಾ ತಾನು ನಂಬಲ್ಲ. ಪೇಪರ್'ನಲ್ಲಿ ಬರೆದಿರುವವರೆಲ್ಲಾ ಸತ್ಯ ಹರಿಶ್ಚಂದ್ರರಾ? ಎಂದು ಅವರು ಉಡಾಫೆಯಾಗಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಪಕ್ಕದಲ್ಲಿದ್ದ ಜೆಡಿಎಸ್ ಶಾಸಕ ಸಾರಾ ಮಹೇಶ್ ಕೂಡ ತಾನು ಪತ್ರಿಕೆಯ ವರದಿಗಳನ್ನು ನಂಬುವುದಿಲ್ಲವೆಂದು ಖೇಣಿಗೆ ಬೆಂಬಲ ಕೊಟ್ಟಿದ್ದು ಇನ್ನಷ್ಟು ಶೋಚನೀಯವೆನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖ್ಯಾತ ನಟ, ಎಂಪಿ, ಕೋಟಿ ಕೋಟಿ ಇದ್ರೂ, ತಳ್ಳೋ ಗಾಡೀಲಿ ಊಟ ಸವಿದ ಜಗ್ಗೇಶ್!
ಯಶ್ ಸೋಲಿಸ್ತಾರಾ ರಣವೀರ್.. ಬ್ಲಾಕ್ ಬಸ್ಟರ್ 'KGF 2' ಬೀಟ್ ಮಾಡಲಿದ್ಯಾ ರಣವೀರ್ "ಧುರಂಧರ್..?