
ನವದೆಹಲಿ(ಜು.28): ಭಾರತ ಕ್ರಿಕೆಟ್ ತಂಡದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಬಾಲ್ಯದ ಕೋಚ್ ಹಾಗೂ ತಮಿಳುನಾಡಿನ ಮಾಜಿ ಸ್ಪಿನ್ನರ್ ಸುನಿಲ್ ಸುಬ್ರಮಣ್ಯಂ ಅವರನ್ನು ಭಾರತ ಕ್ರಿಕೆಟ್ ತಂಡದ ಆಡಳಿತಾತ್ಮಕ ವ್ಯವಸ್ಥಾಪಕರಾಗಿ ಬಿಸಿಸಿಐ ನೇಮಿಸಿದೆ.
ಸುಬ್ರಮಣ್ಯಂ ತಂಡದ ನಿರ್ದೇಶಕರಾಗಿ ಒಂದು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದು, ಆ.3ರಿಂದ ಶ್ರೀಲಂಕಾ ವಿರುದ್ಧ ಆರಂಭಗೊಳ್ಳಲಿರುವ 2ನೇ ಟೆಸ್ಟ್ ವೇಳೆಗೆ ತಂಡವನ್ನು ಕೊಡಿಕೊಳ್ಳಲಿದ್ದಾರೆ. ಅಸ್ಸಾಂ ಹಾಗೂ ತಮಿಳುನಾಡು ಪರವಾಗಿ ಇವರು 74 ಪ್ರಥಮ ದರ್ಜೆ ಪಂದ್ಯಗಳನ್ನಾಡಿ 285 ವಿಕೆಟ್ ಪಡೆದಿದ್ದಾರೆ. ಈ ಹುದ್ದೆಗಾಗಿ ಬಿಸಿಸಿಐ 5 ಮಂದಿಯನ್ನು ಸಂದರ್ಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.