ಎಲ್ಲ ಗಂಡಂದಿರಿಗೂ ಶುಭ ಸುದ್ದಿ ನೀಡಿದ ಬಾಂಬೆ ಹೈಕೋರ್ಟ್

Published : Aug 06, 2018, 08:53 PM ISTUpdated : Aug 06, 2018, 09:05 PM IST
ಎಲ್ಲ ಗಂಡಂದಿರಿಗೂ ಶುಭ ಸುದ್ದಿ ನೀಡಿದ ಬಾಂಬೆ ಹೈಕೋರ್ಟ್

ಸಾರಾಂಶ

ಬಾಂಬೆ ಹೈ ಕೋರ್ಟ್ ನೀಡಿರುವ ಮಹತ್ವದ ತೀರ್ಪು ಎಲ್ಲ ಗಂಡಂದಿರ ಬಾಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಅರೆ ಇದೇನಪ್ಪಾ ಅಂಥ ತೀರ್ಪು ಅಂತೀರಾ? ಈ ಸುದ್ದಿ ಓದಿ

ಮುಂಬೈ[ಆ.6] ಸರಿಯಾಗಿ ಅಡಿಗೆ ಮಾಡು  ಅಥವಾ ಮನೆ ಕೆಲಸಗಳನ್ನು ಸರಿಯಾಗಿ ನಿಭಾಯಿಸು ಎಂದು ಗಂಡ ಹೆಂಡತಿಗೆ ಹೇಳಿದರೆ ಅದು ಆಕೆಯನ್ನು ಕೆಟ್ಟದಾಗಿ ನಡೆಸಿಕೊಂಡಂತೆ ಅಲ್ಲ ಎಂದು  ಬಾಂಬೆ ಹೈ ಕೋರ್ಟ್ ತೀರ್ಪು ನೀಡಿದೆ.

ಸಾಂಗ್ಲಿಯ ನಿವಾಸಿಯೊಬ್ಬರ ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ. 17 ವರ್ಷದ ಹಿಂದಿನ ಪ್ರಕರಣದವೊಂದರ ವಿಚಾರಣೆ ವೇಳೆ ಹೀಗೆ ಹೇಳಿದೆ. 17 ವರ್ಷದ ಹಿಂದೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದರು. ಮಹಿಳೆಗೆ ಮಾನಸಿಕ ಹಿಂಸೆ ನೀಡಿ ವಿಷ ಸೇವಿಸುವಂತೆ ಮಾಡಲಾಗಿತ್ತು ಎಂದು ಪ್ರಾಸಿಕ್ಯೂಷನ್ ವಾದ ಮಂಡಿಸಿತ್ತು. 

ಆದರೆ ಇದಕ್ಕೆ ಯಾವುದೇ ದಾಖಲೆಯಿಲ್ಲ. ಅಡುಗೆ ಸರಿಯಾಗಿ ಮಾಡು ಎಂಬ ಕಾರಣ ನೀಡಿ ಆರೋಪಿಗಳಿಗೆ ಶಿಕ್ಷೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘ ಸಂಸ್ಕಾರದಿಂದಲೇ ರಾಜಕಾರಣವನ್ನು ಸಂಸ್ಕರಿಸಿದ ಅಟಲ್ ಜೀ: ಕಿರಣಕುಮಾರ ವಿವೇಕವಂಶಿ ಲೇಖನ!
ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್