
ರಾತಾಬಾರಿ(ಅ.8): ಮೆರವಣಿಗೆ ವೇಳೆ ಅಸ್ಸಾಂ ನೂತನ ಡೆಪ್ಯೂಟಿ ಸ್ಪೀಕರ್ ಕೃಪಾನಾಥ್ ಮಲ್ಲಾ ಆಯತಪ್ಪಿ ಆನೆ ಮೇಲಿಂದ ಕೆಳಗೆ ಬಿದ್ದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ."
ಅಕ್ಟೋಬರ್ 6ರಂದು ಈ ಘಟನೆ ನಡೆದಿದ್ದು, ಬಿಜೆಪಿ ಶಾಸಕರಾಗಿರುವ ಕೃಪಾನಾಥ್ ಕರೀಂಗಂಜ್ ಜಿಲ್ಲೆಯಲ್ಲಿರುವ ತಮ್ಮ ಸ್ವಕ್ಷೇತ್ರ ರಾತಾಬಾರಿಯಲ್ಲಿ ಅಭಿಮಾನಿಗಳು ಅವರಿಗೆ ಭವ್ಯ ಸ್ವಾಗತ ನೀಡಲು ಆನೆಯ ಮೇಲೆ ಕುಳ್ಳಿರಿಸಿದ್ದರು.
ಆನೆ ಮೇಲೆ ಕೂರಿಸಿ ಮೆರವಣಿಗೆ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ಆನೆಯಿಂದ ಕೆಳಗೆ ಬೀಳುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಉಪ ಸಭಾಧ್ಯಕ್ಷರಿಗೆ ಘಟನೆ ವೇಳೆ ಯಾವುದೇ ಗಾಯಗಳಾಗಿಲ್ಲ.
ಆನೆ ಮೇಲೆ ಕುಳಿತಿದ್ದ ಮಾವುತ ಕೂಡ ಕೃಪಾನಾಥರ ಜತೆ ಕೆಳಗೆ ಬಿದ್ದಿದ್ದು, ನೆರೆದಿದ್ದವರು ತಕ್ಷಣ ಕೃಪಾನಾಥ ಅವರ ಸಹಾಯಕ್ಕೆ ಮುಂದಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.