
ಬಿಸ್ವಾನಾಥ್(ಏ.09): ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೋರ್ವನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ ನಡೆದಿದೆ.
ಶೌಕತ್ ಅಲಿ ಎಂಬ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದಲ್ಲದೇ , ಆತನಿಗೆ ಹಂದಿ ಮಾಂಸ ತಿನ್ನುವಂತೆ ಬಲವಂತ ಮಾಡಲಾಗಿದೆ ಎನ್ನಲಾಗಿದೆ. ಗೋಮಾಂಸ ಮಾರಾಟ ಮಾಡಿದ್ದಕ್ಕೆ ಶಿಕ್ಷೆಯಾಗಿ ಶೌಕತ್ ಅಲಿಗೆ ಹಂದಿ ಮಾಂಸ ತಿನ್ನಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಶೌಕತ್ ಅಲಿಯನ್ನು ರಕ್ಷಣೆ ಮಾಡಿದ್ದಲ್ಲದೇ , ಘಟನೆಗೆ ಸಂಬಂಧಿಸಿದಂತೆ ಐವರು ಯುವಕರನ್ನು ವಶಕ್ಕೆ ಪಡೆದಿದೆ. ಹಲ್ಲೆಗೊಳಗಾದ ಶೌಕತ್ ಅಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.