ಈಶಾನ್ಯ ಭಾರತಕ್ಕೂ ಕಾಲಿಟ್ಟ ಗೋರಕ್ಷಕರು| ಗೋಮಾಂಸ ಮಾರುತ್ತಿದ್ದ ಆರೋಪದ ಮೇಲೆ ಅಲ್ಪಸಂಖ್ಯಾತ ವ್ಯಕ್ತಿಗೆ ಥಳಿತ| ಶಿಕ್ಷೆಯಾಗಿ ಹಂದಿ ಮಾಂಸ ತಿನ್ನಿಸಿದ ಗೋರಕ್ಷಕರು| ಶೌಕತ್ ಅಲಿ ಮೇಲಿನ ಹಲ್ಲೆ ವಿಡಿಯೋ ವೈರಲ್| ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ ಪೊಲೀಸರು| ಗಾಯಗೊಂಡಿರುವ ಶೌಕತ್ ಅಲಿ ಆಸ್ಪತ್ರೆಗೆ ದಾಖಲು|
ಬಿಸ್ವಾನಾಥ್(ಏ.09): ಗೋಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೋರ್ವನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಅಸ್ಸಾಂನ ಬಿಸ್ವಾನಾಥ್ ಜಿಲ್ಲೆಯಲ್ಲಿ ನಡೆದಿದೆ.
ಶೌಕತ್ ಅಲಿ ಎಂಬ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದಲ್ಲದೇ , ಆತನಿಗೆ ಹಂದಿ ಮಾಂಸ ತಿನ್ನುವಂತೆ ಬಲವಂತ ಮಾಡಲಾಗಿದೆ ಎನ್ನಲಾಗಿದೆ. ಗೋಮಾಂಸ ಮಾರಾಟ ಮಾಡಿದ್ದಕ್ಕೆ ಶಿಕ್ಷೆಯಾಗಿ ಶೌಕತ್ ಅಲಿಗೆ ಹಂದಿ ಮಾಂಸ ತಿನ್ನಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಶೌಕತ್ ಅಲಿಯನ್ನು ರಕ್ಷಣೆ ಮಾಡಿದ್ದಲ್ಲದೇ , ಘಟನೆಗೆ ಸಂಬಂಧಿಸಿದಂತೆ ಐವರು ಯುವಕರನ್ನು ವಶಕ್ಕೆ ಪಡೆದಿದೆ. ಹಲ್ಲೆಗೊಳಗಾದ ಶೌಕತ್ ಅಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.