ಶೀಘ್ರದಲ್ಲೇ ಭೂಮಿಗೆ ಗಂಡಾಂತರ; ಕ್ಷುದ್ರ ಗ್ರಹ ಅಪ್ಪಳಿಸುವುದು ಖಚಿತ?

Published : Jun 21, 2017, 05:26 PM ISTUpdated : Apr 11, 2018, 12:35 PM IST
ಶೀಘ್ರದಲ್ಲೇ ಭೂಮಿಗೆ ಗಂಡಾಂತರ; ಕ್ಷುದ್ರ ಗ್ರಹ ಅಪ್ಪಳಿಸುವುದು ಖಚಿತ?

ಸಾರಾಂಶ

1908ರ ಜೂನ್ 30ರಂದು ಸೈಬೀರಿಯಾದ ನಿರ್ಜನ ಪ್ರದೇಶ ಟುಂಗುಸ್ಕಾ ಎಂಬಲ್ಲಿ ಪುಟ್ಟ ಕ್ಷುದ್ರಗ್ರಹವೊಂದು ಅಪ್ಪಳಿಸಿತ್ತು. ಆಗ ಸುಮಾರು 800 ಚದರ ಮೈಲಿ ವಿಸ್ತೀರ್ಣದಷ್ಟು ಭೂಭಾಗಕ್ಕೆ ಘಾಸಿಯಾಗಿತ್ತು. ಈಗಲೂ ಅಲ್ಲಿ ಬೃಹದಾಕಾರದ ಕುಳಿ ಇರುವುದನ್ನು ಕಾಣಬಹುದು.

ಲಂಡನ್(ಜೂನ್ 21): ಕ್ಷುದ್ರಗ್ರಹವೊಂದು ಭೂಮಿಗೆ ಅಪ್ಪಳಿಸುವ ಕಾಲ ಸನ್ನಿಹಿತವಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಹಾಗೇನಾದರೂ ಆದಲ್ಲಿ ಭೂಮಿಗೆ ಸಾಕಷ್ಟು ಘಾಸಿಯಾಗಲಿದೆ. ಆಕಾಶದಲ್ಲಿ ಅಡ್ಡಾಡುತ್ತಿರುವ ಸಾವಿರಾರು ಕ್ಷುದ್ರಗಹ(Asteroid)ಗಳ ಪೈಕಿ ಯಾವುದಾದರೂ ಒಂದು ಆಕಾಶಕಾಯವು ಭೂಮಿಗೆ ಡಿಕ್ಕಿ ಹೊಡೆಯುವ ಸಾಧ್ಯತೆ ಬಹಳಷ್ಟಿದೆ ಎಂದು ಐರ್ಲೆಂಡ್ ದೇಶದ ಕ್ವೀನ್ಸ್ ಯೂನಿವರ್ಸಿಟಿಯ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಕ್ಷುದ್ರ ಗ್ರಹದಿಂದ ಎಷ್ಟು ಅಪಾಯ?
1908ರ ಜೂನ್ 30ರಂದು ಸೈಬೀರಿಯಾದ ನಿರ್ಜನ ಪ್ರದೇಶ ಟುಂಗುಸ್ಕಾ ಎಂಬಲ್ಲಿ ಪುಟ್ಟ ಕ್ಷುದ್ರಗ್ರಹವೊಂದು ಅಪ್ಪಳಿಸಿತ್ತು. ಆಗ ಸುಮಾರು 800 ಚದರ ಮೈಲಿ ವಿಸ್ತೀರ್ಣದಷ್ಟು ಭೂಭಾಗಕ್ಕೆ ಘಾಸಿಯಾಗಿತ್ತು. ಈಗಲೂ ಅಲ್ಲಿ ಬೃಹದಾಕಾರದ ಕುಳಿ ಇರುವುದನ್ನು ಕಾಣಬಹುದು.

ಈಗ ಅಂಥದ್ದೇ ಪುಟ್ಟ ಕ್ಷುದ್ರಗ್ರಹವು ನಗರ ಪ್ರದೇಶದ ಮೇಲೆ ಬಿದ್ದರೆ ಇಡೀ ನಗರವೇ ನಾಶವಾಗಿಬಿಡುತ್ತದೆ. ಭೂಮಿಯಷ್ಟೇ ದೊಡ್ಡದಿರುವ ಆಕಾಶಕಾಯಗಳೂ ಇವೆ. ಒಂದು ವೇಳೆ, ತುಸು ದೊಡ್ಡದಾಗಿರುವ ಕ್ಷುದ್ರಗ್ರಹವೇನಾದರೂ ಭೂಮಿಗೆ ಢಿಕ್ಕಿ ಹೊಡೆದರೆ ಅದರಿಂದಾಗುವ ಅಂದಾಜನ್ನು ಅರ್ಥ ಮಾಡಿಕೊಳ್ಳುವುದೇ ಕಷ್ಟ. ಭೂಮಿಯಲ್ಲಿರುವ ಬಹುತೇಕ ಜೀವಿಗಳು ನಿರ್ನಾಮವಾಗಲಿವೆ ಎಂದು ವಿಜ್ಞಾನಿಗಳು ಅಂದಾಜಿಸುತ್ತಾರೆ. ದೊಡ್ಡ ಕ್ಷುದ್ರ ಗ್ರಹಗಳಿಂದ ಸದ್ಯಕ್ಕೆ ಅಪಾಯವಿಲ್ಲ. ಆದರೆ, ಸಣ್ಣ ಕ್ಷುದ್ರಗ್ರಹಗಳು ಯಾವಾಗ ಬೇಕಾದರೂ ಭೂಮಿಗೆ ಅಪ್ಪಳಿಸಬಹುದು ಎಂದನ್ನಲಾಗುತ್ತಿದೆ.

ಕಳೆದ ಶತಮಾನದ ಆರಂಭದಲ್ಲಿ ಸಂಭವಿಸಿದ ಸೈಬೀರಿಯಾದ ಘಟನೆಯ ಸ್ಮರಣಾರ್ಥ ಪ್ರತೀ ವರ್ಷ ಜೂನ್ 30ರಂದು ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನವೆಂದು ಪರಿಗಣಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ: ಕುತೂಹಲ!
ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!