
ಇಂಧೋರ್(ಸೆ.14): ದಾವೂದಿ ಬೊಹರಾ ದೇಶಪ್ರೇಮ ಇಡೀ ಭಾರತ ದೇಶಕ್ಕೆ ಉದಾಹರಣೆಯಾಗಿದ್ದು, ಶಾಂತಿ ಸಂದೇಶದೊಂದಿಗೆ ಬೊಹರಾ ಸಮಾಜ ಜೀವನ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಇಂದೋರ್'ನ ಸೈಫಿ ಮಸೀದಿಯಲ್ಲಿ ದಾವೂದಿ ಬೊಹರಾ ಸಮುದಾಯದ ಸಭೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ, ತಮ್ಮ ಭಾಷಣದಲ್ಲಿ ಬೊಹರಾ ಸಮಾಜವನ್ನು ಕೊಂಡಾದಿದ್ದಾರೆ.
ಸಭೆಯಲ್ಲಿ ಮಾತನಾಡಿದ ಮೋದಿ, ರಾಷ್ಟ್ರ ನಿರ್ಮಾಣಕ್ಕಾಗಿ ನನಗೆ ಅವಕಾಶ ನೀಡಿದ್ದೀರಿ. ನನ್ನ ಪ್ರತಿ ಹೆಜ್ಜೆಗೂ ಬೊಹರಾ ಸಮುದಾಯ ಹೆಗಲು ನೀಡಿದೆ. ನಿಮ್ಮೆಲ್ಲರ ಮಧ್ಯೆ ನಿಂತು ಮಾತನಾಡುವುದು ನನಗೆ ಹೊಸ ಅನುಭವವನ್ನು ನೀಡುತ್ತಿದೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜನತೆಗೆ ಧನ್ಯವಾದಗಳನ್ನು ಹೇಳುತ್ತೇನೆ. ಇಮಾಂ ಹುಸೇನರ ಪವಿತ್ರ ಸಂದೇಶವನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದರು.
ಬೊಹರಾ ಸಮಾಜದ ಆಲೋಚನೆ ದೇಶವನ್ನು ಮತ್ತಷ್ಟು ಸದೃಢಗೊಳಿಸುತ್ತದೆ. ಗುಜರಾತ್ ರಾಜ್ಯದಲ್ಲಿ ಪ್ರಕೃತಿ ವಿಕೋಪದ ವೇಳೆ ಅಗತ್ಯ ಸಹಕಾರ ನೀಡುವ ಮೂಲಕ ಬೊಹರಾ ಸಮುದಾಯ ಸಾಕಷ್ಟು ಬೆಂಬಲ ನೀಡಿದೆ. ಈ ಸಮುದಾಯ ವಿಶ್ವವೇ ಒಂದು ಕುಟುಂಬವೆಂದು ಭಾವಿಸಿದೆ ಎಂದು ಪ್ರಧಾನಿ ಹೊಗಳಿದ್ದಾರೆ.
ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ವಿಚಾರಗಳಲ್ಲಿ ನಿಮ್ಮ ಪ್ರಯತ್ನಗಳು ಶ್ಲಾಘನೀಯ. ದಾವೂದಿ ಬೊಹರಾ ಸಮುದಾಯದ ಜೊತೆ ಬರಲು ಉತ್ಸುಕನಾಗಿದ್ದೇನೆ. ಶಿಕ್ಷಣ, ಕೌಶಲ್ಯಾಭಿವೃದ್ಧಿಗೂ ನಿಮ್ಮ ಸಮುದಾಯ ಕೈಜೋಡಿಸಿದೆ. ಹೃದಯ ಹಾಗೂ ಮನಸ್ಸನ್ನು ಸ್ವಚ್ಛ ಮಾಡಬೇಕಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.