
ಜೈಪುರ(ಡಿ.23): ಬನಾಸ್ ನದಿಗೆ ಖಾಸಗಿ ಬಸ್ ಒಂದು ಬಿದ್ದು 32 ಮಂದಿ ಮೃತಪಟ್ಟಿದ್ದು, ಏಳಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಮಧೋಪುರ್ ಜಿಲ್ಲೆಯಲ್ಲಿ ನಡೆದಿದೆ.
ಸವಾಯಿ ಮಧೋಪುರ್ನಿಂದ ಲಾಲ್'ಸೊಟ್'ಗೆ ಪ್ರಯಾಣಿಸುತ್ತಿದ್ದ ಬಸ್, ಸೂರ್ವಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 100 ಅಡಿ ಎತ್ತರದ ಸೇತುವೆಯಿಂದ ನದಿಗೆ ಬಿದ್ದಿದೆ. ನಿದ್ದೆಯ ಮಂಪರಿನಲ್ಲಿದ್ದ ಚಾಲಕನಿಗೆ ಬಸ್ ಮೇಲೆ ನಿಯಂತ್ರಣ ತಪ್ಪಿ ಅದು ಸೇತುವೆಯ ಗೋಡೆಗೆ ಬಡಿದು ಬಳಿಕ ಕೆಳಕ್ಕೆ ಉರುಳಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ರಕ್ಷಣಾ ಕಾರ್ಯಾಚರಣೆ ಸೇರಿದಂತೆ, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯಗಳನ್ನು ಒದಗಿಸುವ ಜೊತೆಗೆ, ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ತೀವ್ರ ನಿಗಾವಿರಿಸಿದೆ’ ಎಂದು ಪ್ರಧಾನಿ ಸಚಿವಾಲಯ ಟ್ವೀಟ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.