ರಮೇಶ್ ಜಾರಕಿಹೊಳಿ ಕ್ಯಾಂಪ್ ಗೆ ಮತ್ತೋರ್ವ ಕೈ ಶಾಸಕ?

Published : May 16, 2019, 10:07 AM IST
ರಮೇಶ್ ಜಾರಕಿಹೊಳಿ ಕ್ಯಾಂಪ್ ಗೆ ಮತ್ತೋರ್ವ ಕೈ ಶಾಸಕ?

ಸಾರಾಂಶ

ಕೈ ಅತೃಪ್ತ ನಾಯಕರ ಸಾಲಿಗೆ ಇದೀಗ ಇನ್ನೋರ್ವ ಕೈ ಶಾಸಕ ಸೇರಿದ್ದಾರಾ ಎನ್ನುವ ಶಂಕೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗುಪ್ತವಾಗಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು.

ಬೆಂಗಳೂರು :  ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆ ಪ್ರಚಾರ ಭರಾಟೆ ದಿನೇದಿನೇ ಜೋರಾಗುತ್ತಿದ್ದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಸರಣಿ ಸಭೆ ಮುಂದುವರೆಸಿದ್ದಾರೆ. ಬುಧವಾರ ಅಥಣಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಮಹೇಶ್‌ ಕುಮಟಳ್ಳಿ ಅವರು ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದೆ.

ಮಹೇಶ್‌ ಕುಮಟಳ್ಳಿ ಮೇ 9ರಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರೊಂದಿಗೆ ಕುಂದಗೋಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಿದ್ದರು. ಕಳೆದ ಒಂದು ತಿಂಗಳಿಂದ ರಮೇಶ್‌ ಜಾರಕಿಹೊಳಿ ಅವರಿಂದ ಅಂತರ ಕಾಯ್ದುಕೊಂಡಿದ್ದರು. ಮಂಗಳವಾರ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದ ಬೆನ್ನಲ್ಲೇ ಮಹೇಶ್‌ ಕುಮಟಳ್ಳಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್‌ ಕುಮಟಳ್ಳಿ, ನಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಾದ ಅನಿವಾರ್ಯತೆ ಇಲ್ಲ. ಕುಂದಗೋಳದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದೇನೆ. ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿಲ್ಲ. ಹೀಗಾಗಿ ಅದರ ಫೈಲ್‌ ತೆಗೆದುಕೊಂಡು ಕ್ಷೇತ್ರದ ಸಮಸ್ಯೆ ಬಗ್ಗೆ ಚರ್ಚಿಸಲು ಬಂದಿದ್ದೇನೆ ಎಂದಿದ್ದಾರೆ.

ಸಿ.ಪಿ.ಯೋಗೇಶ್ವರ್‌ ಹಾಗೂ ರಮೇಶ್‌ ಜಾರಕಿಹೊಳಿ ಭೇಟಿ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ಎಲ್ಲರೂ ಭೇಟಿಯಾಗುತ್ತಾರೆ. ಅದಕ್ಕೆಲ್ಲಾ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಅವರೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಾವೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬತ್ತಿದ್ದ 40 ವರ್ಷದ ರಾಮನಗುಡ್ಡ ಕೆರೆಗೆ ನೀರು ತುಂಬಿಸುವ ಯೋಜನೆ ಫಲಪ್ರದ; 900 ಎಕರೆ ಜಮೀನಿಗೆ ನೀರಾವರಿ
ಸೋಮೇಶ್ವರ ಬೀಚ್‌ ಈಗ ಇನ್ನಷ್ಟು ಸ್ವಚ್ಛ- ಸುಂದರ!