
ಬೆಂಗಳೂರು (ನ.24): ಕೆಂಪೇಗೌಡ ರಸ್ತೆಯಿಂದ ನಿನ್ನೆ ನಾಪತ್ತೆಯಾಗಿದ್ದ ಎಟಿಎಂ ಘಟಕಗಳಗೆ ಹಣ ತುಂಬುವ ವಾಹನ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಬಳಿ ಪತ್ತೆಯಾಗಿದೆ.
ಎಟಿಎಂ ಘಟಕಗಳಿಗೆ ಹಣ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ₹ 1.37 ಕೋಟಿ ನಗದು ಇದ್ದ ವಾಹನದ ಜತೆಗೆ ಚಾಲಕ ಡಾಮಿನಿಕ್ ಜಾಯ್ ಪರಾರಿಯಾಗಿದ್ದ. 44 ಲಕ್ಷ ನಗದು ಮತ್ತು ಬಂದೂಕನ್ನು ವಾಹನದಲ್ಲೇ ಬಿಟ್ಟು ಉಳಿದ ₹ 93 ಲಕ್ಷ ಹಣದೊಂದಿಗೆ ಡಾಮಿನಿಕ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಸೆಕ್ಯುರ್ ಟ್ರಾನ್ಸಿಟ್’ ಏಜೆನ್ಸಿಯ ಚಾಲಕನಾಗಿದ್ದ ಡಾಮಿನಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.