ಲೋಕಾಯುಕ್ತರಿಗೆ ಚಾಕು ಇರಿತ..!

Published : Mar 07, 2018, 02:20 PM ISTUpdated : Apr 11, 2018, 12:42 PM IST
ಲೋಕಾಯುಕ್ತರಿಗೆ ಚಾಕು ಇರಿತ..!

ಸಾರಾಂಶ

ಲೋಕಾಯುಕ್ತ ಕಚೇರಿಯಲ್ಲೇ ಈ ಘಟನೆ ನಡೆದಿದ್ದು, ವಿಚಾರಣೆಗೆ ಬಂದಿದ್ದ ತೇಜಸ್ ಶರ್ಮಾ ಚಾಕುವಿನಿಂದ ಲೋಕಾಯುಕ್ತರನ್ನು ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರಯವ ವಿಶ್ವನಾಥ್ ಶೆಟ್ಟಿ ಅವರನ್ನು ಹತ್ತಿರದ ಮಲ್ಯ ಆಸ್ಫತ್ರಗೆ ದಾಖಲಿಸಲಾಗಿದೆ.

ಬೆಂಗಳೂರು(ಮಾ.07): ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕುವಿನಿಂದ ಇರಿಯಲಾಗಿದ್ದು, ನ್ಯಾಯಮೂರ್ತಿಗಳ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಲೋಕಾಯುಕ್ತ ಕಚೇರಿಯಲ್ಲೇ ಈ ಘಟನೆ ನಡೆದಿದ್ದು, ವಿಚಾರಣೆಗೆ ಬಂದಿದ್ದ ತೇಜಸ್ ಶರ್ಮಾ ಚಾಕುವಿನಿಂದ ಲೋಕಾಯುಕ್ತರನ್ನು ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡಿರಯವ ವಿಶ್ವನಾಥ್ ಶೆಟ್ಟಿ ಅವರನ್ನು ಹತ್ತಿರದ ಮಲ್ಯ ಆಸ್ಫತ್ರಗೆ ದಾಖಲಿಸಲಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೇಜಸ್ ಶರ್ಮಾ ಅವರನ್ನು ವಿಧಾನಸೌ ಠಾಣಾ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ತೇಜಸ್ ಶರ್ಮಾ ಈ ಕೃತ್ಯ ಎಸಗಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ದೇವೇಗೌಡ ಲೋಕಾಯುಕ್ತರಿಗೆ ಚಾಕು ಹಾಕುವುದು ಎಂದರೆ ಏನು..? ಅಯ್ಯೋ ರಾಮಾ, ನಾವು ಗೂಂಡಾ ರಾಜ್ಯದಲ್ಲಿ ಇದ್ದೀವಾ..? ಸರ್ಕಾರ ಮೊದಲೇ ಲೋಕಾಯುಕ್ತ ಸಂಸ್ಥೆಯನ್ನು ಸಾಯಿಸಿದೆ. ಕಾನೂನು ಸುವ್ಯವಸ್ಥೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!