
ಕೋಲಾರ(ಅ.17): ಕೋಲಾರದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲೇ ಕೊಲೆ ಯತ್ನ ನಡೆದಿದ್ದು, ಕ್ಷೇತ್ರದ ಆಡಳಿತಾಧಿಕಾರಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದೆ. ಈ ದೃಶ್ಯಗಳು ಕ್ಯಾಮೆರದಲ್ಲಿ ಸೆರೆಯಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಮ್ಮಸಂದ್ರದಲ್ಲಿರುವ ಪ್ರಸಿದ್ಧ ಕೋಟಿ ಶಿವಲಿಂಗ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ದೇವಾಲಯದ ಆಡಳಿತಾಧಿಕಾರಿ ಕುಮಾರಿ (50) ಎಂಬುವವರ ಮೇಲೆ ಹಲ್ಲೆ ನಡೆದಿದೆ.
ಭಾನುವಾರ ಕಮ್ಮಸಂದ್ರ ಗ್ರಾಮದ ಸಂತೋಷ್ ಮತ್ತು ಸ್ನೇಹಿತರಿಂದ ಹಲ್ಲೆ ನಡೆಸಲಾಗಿದ್ದು, ಲಾಂಗ್ನಿಂದ 12 ಬಾರಿ ಹಲ್ಲೆ ಮಾಡಲಾಗಿದ್ದು, ಕುಮಾರಿ ಕುತ್ತಿಗೆಯನ್ನು ಕಡಿದು ಹಾಕುವ ಯತ್ನ ನಡೆದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಕುಮಾರಿ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.