
ಚೆನ್ನೈ (ಮಾ.03): ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಬಗ್ಗೆ ತನಿಖೆ ನಡೆಸಬೇಕೆಂದು ಪನ್ನೀರ್ ಸೆಲ್ವಂ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.
ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ಕರೆದುಕೊಂಡು ಹೋಗಬೇಕೆಂದಿದ್ದೆ. ದುರಾದೃಷ್ಟವಶಾತ್ ಇದು ಈಡೇರಲೇ ಇಲ್ಲ. ಜಯಲಲಿತಾರಿಗೆ ಚಿಕಿತ್ಸೆ ನೀಡಿದ ವೈದ್ಯರ ಜೊತೆ ನಾನು ಮಾತುಕತೆ ನಡೆಸಿದ್ದೇನೆ.
ಅಮ್ಮನಿಗೆ ನೀಡಿರುವ ಚಿಕಿತ್ಸೆಯ ಬಗ್ಗೆ ಅನುಮಾನಗಳಿವೆ. ಅವರು ದೀರ್ಘಕಾಲದಿಂದ ಬಳಲುತ್ತಿರಲಿಲ್ಲ. ಅಂತದ್ದರಲ್ಲಿ ದಿಢೀರನೇ ಸಾವನ್ನಪ್ಪಿದ್ದಾರೆ. ಅವರ ಸಾವಿನ ಬಗ್ಗೆ ಸರ್ಕಾರ ತನಿಖೆ ನಡೆಸಬೇಕೆಂದು ನಾವು ಬಯಸುತ್ತೇವೆ. ಸತ್ಯ ಹೊರಬಂದು ಅನುಮಾನಗಳಿಗೆ ತೆರೆ ಬೀಳಬೇಕು ಎಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಸರ್ಕಾರ ಒಂದು ವೇಳೆ ತನಿಖೆಗೆ ಆಗ್ರಹಿಸದಿದ್ದರೆ ಮಾ.08 ರಿಂದ ನಮ್ಮ ಬೆಂಬಲಿಗರೊಂದಿಗೆ ನಾನು ಉಪವಾಸ ಸತ್ಯಾಗ್ರಹ ಕೂರುತ್ತೇನೆ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.