
ಚಿತ್ರದುರ್ಗ(ಡಿ.2): ಸರ್ಕಾರಿ ಬಸ್ ಚಾಲಕನೋರ್ವನ ಮೇಲೆ ಆಟೋ ಚಾಲಕರು ಹಲ್ಲೆ ಮಾಡಿರುವ ಘಟನೆ ಚಿತ್ರದುರ್ಗದ ಐಯುಡಿಪಿ ಬಡಾವಣೆಯಲ್ಲಿ ನಡೆದಿದೆ. ರಸ್ತೆ ಮಧ್ಯದಲ್ಲೇ ಇಬ್ಬರೂ ಕೂಡ ಕುತ್ತಿಗೆ ಹಿಡಿದು ಕುಸ್ತಿಯಾಡಿಕೊಂಡಿದ್ದಾರೆ. ನಗರ ಸಾರಿಗೆ ಚಾಲಕ ಲಕ್ಷ್ಮಣ್ ಮೇಲೆ ಆಟೋ ಚಾಲಕ ರಾಜು ಹಾಗೂ ರವಿ ಮತ್ತು ಅವರ ಸಹಚರರಿಂದ ಹಲ್ಲೆ ನಡೆದಿದೆ. ಮೂಖ ಪ್ರೇಕ್ಷಕರಂತೆ ಪ್ರಯಾಣಿಕರು ಕುಸ್ತಿಯನ್ನು ನೋಡಿದ್ದಾರೆ.
ಐಯುಡಿಪಿ ಬಡಾವಣೆಯ 10ನೇ ಕ್ರಾಸ್ ಬಸ್ ನಿಲ್ದಾಣದಲ್ಲಿ ಬಸ್’ನಿಂದ ಪ್ರಯಾಣಿಕರು ಇಳಿಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಬಸ್ಸನ್ನು ನಿಲ್ಲಿಸಿದ್ದರಿಂದ ಆಕ್ರೋಶಗೊಂಡ ಆಟೋ ಚಾಲಕರು ಬಸ್ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮದ್ಯಪಾನ ಮಾಡಿದ್ದ ಆಟೋ ಚಾಲಕರು ಮನಬಂದಂತೆ ವರ್ತಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.