
ಶ್ರೀನಗರ(ಜ. 25): ಜಮ್ಮು-ಕಾಶ್ಮೀರದ ಗಂದರ್'ಬಾಲ್ ಜಿಲ್ಲೆಯಲ್ಲಿ ಭೀಕರ ಹಿಮಪಾತ ಸಂಭವಿಸಿದ್ದು, ಓರ್ವ ಸೈನಿಕ ಸೇರಿ ಐದಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸೋನಾಮಾರ್ಗ್ ಬಳಿ ಇರುವ ಸೇನಾ ಶಿಬಿರ, ಹಾಗೂ ವಿವಿಧ ಗ್ರಾಮಗಳು ಹಿಮಪಾತಕ್ಕೆ ಸಿಲುಕಿ ಹಾನಿಗೊಂಡಿವೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಗುರೆಜ್ ಸೆಕ್ಟರ್'ನಲ್ಲಿನ ಗ್ರಾಮದ ಮನೆಯೊಂದು ಸಂಪೂರ್ಣವಾಗಿ ಮಂಜಿನಡಿ ಸಿಲುಕಿದೆ. ಈ ಮನೆಯ ನಾಲ್ಕು ಸದಸ್ಯರು ಸಾವನ್ನಪಿದ್ದಾರೆನ್ನಲಾಗಿದೆ.
ಕಾಶ್ಮೀರ ಕಣಿವೆ ಹಾಗೂ ಹಿಮಾಲಯದ ತಪ್ಪಲಿನಲ್ಲಿ ಹಿಮಪಾತ ಸಂಭವಿಸುವುದು ಸರ್ವೇಸಾಮಾನ್ಯ. ಕಳೆದ ವಾರವಷ್ಟೇ ಜಿಲ್ಲಾಡಳಿತ ಮತ್ತು ಪೊಲೀಸರು ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆಯಾಗಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.