
ನವದೆಹಲಿ(ಆ.20): ಸಚಿವರು, ಅಧಿಕಾರಿಗಳು ಪಂಚತಾರಾ ಹೋಟೆಲ್ಗಳಲ್ಲಿ ವಾಸ್ತವ್ಯ ಹೂಡುವ ಸಂಸ್ಕೃತಿಗೆ ಕಡಿವಾಣ ಹಾಕಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್ ಸೂಚನೆ ನೀಡಿದ್ದಾರೆ.
ಇತ್ತೀಚಿಗೆ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸಚಿವರಿಗೆ ಪ್ರತ್ಯೇಕವಾಗಿ ಪಾಠ ಮಾಡಿದ ಮೋದಿ, ಯಾವುದೇ ಕಾರಣಕ್ಕೂ ಪಂಚತಾರಾ ಹೋಟೆಲ್'ಗಳಲ್ಲಿ ವಾಸ್ತವ್ಯ ಹೂಡುವ ಪರಿಪಾಠ ಬೆಳೆಸಿಕೊಳ್ಳಬಾರದು. ಅದರಲ್ಲೂ ಅಧಿಕೃತ ಪ್ರವಾಸಗಳಿಗೆ ತೆರಳಿದಾಗ ಸರಕಾರಿ ಪ್ರವಾಸಿ ಮಂದಿರಗಳಲ್ಲಿ ಅಥವಾ ಸರಕಾರ ನೀಡುವ ಆತಿಥ್ಯವನ್ನೇ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.
ಕೆಲವು ಅಧಿಕಾರಿಗಳು, ಸಚಿವರು ಫೈವ್ ಸ್ಟಾರ್ ಸಂಸ್ಕೃತಿಗೆ ಮಾರು ಹೋಗಿರುವ ಬಗ್ಗೆ ವರದಿಗಳು ಬಂದಿವೆ. ಇದಕ್ಕೆ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ಎಚ್ಚರಿಸಿದ್ದಾರೆ.
ಇನ್ನು ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತಿದ್ದು, ಮಿತವ್ಯಯಕ್ಕೆ ಹೆಚ್ಚು ಒತ್ತು ನೀಡಬೇಕು. ಇದರಿಂದ ಭ್ರಷ್ಟಾಚಾರಕ್ಕೆ ನಿಯಂತ್ರಣ ಹೇರಿದಂತಾಗುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಮುಕ್ತ ಆಡಳಿತವೇ ನಮ್ಮ ಗುರಿ, ಧ್ಯೇಯ ಆಗಿರಬೇಕು. ಅಲ್ಲದೇ ಹಗರಣ ಮುಕ್ತ ಸರ್ಕಾರ ಆಗಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮೋದಿ ಖಡಕ್ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.