ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

Published : Oct 30, 2018, 10:49 AM IST
ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

ಸಾರಾಂಶ

ಎಂಪಿ ಎಲೆಕ್ಷನ್ ಮುನ್ನ ಅಯೋಧ್ಯೆ ತೀರ್ಪಿಲ್ಲ? ವಿಚಾರಣೆ ಜನವರಿಗೆ ಮುಂದೂಡಿಕೆ | ಜನವರಿ ಮೊದಲ ವಾರದಲ್ಲಿ ವಿಚಾರಣೆಗೆ ಹೊಸ ಪೀಠ ರಚನೆ 

ನವದೆಹಲಿ (ಅ. 30): ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ 2019 ರ ಲೋಕಸಭೆ ಚುನಾವಣೆ ಒಳಗೆ ತೆರೆ ಬೀಳಬಹುದು ಎಂಬ ನಿರೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ತಣ್ಣೀರೆರಚಿದೆ.

ವಿವಾದದ ತುರ್ತು ವಿಚಾರಣೆಗೆ ನಿರಾಕರಿಸಿರುವ ನ್ಯಾಯಾಲಯ ‘ಸೂಕ್ತ ಪೀಠವು ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿದೆ’ ಎಂದಿದೆ. ಹೀಗಾಗಿ ವಿಚಾರಣೆ ಮುಂದಿನ ವರ್ಷದ ಆರಂಭಕ್ಕೆ ಮುಂದಕ್ಕೆ ಹೋಗಿದ್ದು, ಸದ್ಯದ ಮಟ್ಟಿಗೆ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವುದು ಅನುಮಾನವಾಗಿದೆ.

ವಿವಾದಿತ ಭೂಮಿಯನ್ನು 3 ಭಾಗವಾಗಿ ಮಾಡಿ ಹಂಚಿದ್ದ 2010 ರ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಾಧೀಶ ನ್ಯಾ| ರಂಜನ್ ಗೊಗೋಯ್, ನ್ಯಾ| ಎಸ್.ಕೆ. ಕೌಲ್ ಹಾಗೂ ನ್ಯಾ| ಕೆ.ಎಂ. ಜೋಸೆಫ್ ಅವರ ಪೀಠ, ‘ಸೂಕ್ತ ಪೀಠವು ಜನವರಿಯಲ್ಲಿ ವಿಚಾರಣಾ ದಿನಾಂಕವನ್ನು ನಿರ್ಧರಿಸಲಿದೆ. ಆದರೆ ವಿಚಾರಣೆ ಯಾವಾಗ ಆರಂಭವಾಗಲಿದೆ ಎಂಬುದನ್ನು ಹೇಳಲಾಗದು’ ಎಂದಿತು.

‘ನಮಗೆ ನಮ್ಮದೇ ಆದ ಆದ್ಯತೆಗಳಿವೆ. ‘ಸೂಕ್ತ ಪೀಠ’ದ ಮುಂದೆ ಅರ್ಜಿಯು ವಿಚಾರಣೆಗೆ ಬಂದಾಗ ವಿಚಾರಣೆ ಜನವರಿಯಲ್ಲಿ ನಡೆಯಬೇಕೋ? ಮಾರ್ಚ್‌ನಲ್ಲೋ ಅಥವಾ ಏಪ್ರಿಲ್‌ನಲ್ಲೋ ಎಂಬುದನ್ನು ಅದು ತೀರ್ಮಾನಿಸಲಿದೆ’ ಎಂದು ಹೇಳಿತು. ಇದೇ ವೇಳೆ ಮಹತ್ವದ ಸ್ಪಷ್ಟನೆಯೊಂದನ್ನು ನೀಡಿದ ಮುಖ್ಯ ನ್ಯಾಯಾಧೀಶರು, ‘ಅಪೀಲುಗಳು ಜನವರಿ ಮೊದಲ ವಾರದಲ್ಲಿ ಪೀಠವೊಂದರ ಮುಂದೆ ಬರಲಿದ್ದು, ಆ ಪೀಠವು ವಿಚಾರಣೆ ನಡೆಸುವುದಿಲ್ಲ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Gadag: ಯುವತಿ ಮೇಲೆ ಆ್ಯಸಿಡ್ ದಾಳಿ ದಾಳಿಯ ವದಂತಿ; ಜನರಲ್ಲಿ ಆತಂಕ ಸೃಷ್ಟಿಸಿದ ಸ್ಫೋಟ, ಓರ್ವನ ಬಂಧನ
₹1000+ ಕೋಟಿ ಸೈಬರ್‌ ವಂಚನೆ : ಸ್ವಾಮೀಜಿ.ಕಾಂ, ನಿಯೋ ಸಿಸ್ಟಮ್‌ ಹೆಸರಲ್ಲಿ ಜಾಲ ಪತ್ತೆ