ಅಯೋಧ್ಯೆ ಧರ್ಮಸಭಾ ಅಂತ್ಯ: ಮಂದಿರಕ್ಕಾಗಿ ಬಿಗಿಪಟ್ಟು!

Published : Nov 25, 2018, 05:36 PM IST
ಅಯೋಧ್ಯೆ ಧರ್ಮಸಭಾ ಅಂತ್ಯ: ಮಂದಿರಕ್ಕಾಗಿ ಬಿಗಿಪಟ್ಟು!

ಸಾರಾಂಶ

ಅಯೋಧ್ಯೆ ಧರ್ಮಸಭಾ ಕಾರ್ಯಕ್ರಮ ಅಂತ್ಯ! ರಾಮ ಮಂದಿರ ನಿರ್ಮಾಣಕ್ಕೆ ಹೆಚ್ಚಾದ ಒತ್ತಡ! ಸುಗ್ರೀವಾಜ್ಞೆಗಾಗಿ ವಿಹೆಚ್ ಪಿ, ಶಿವಸೇನೆ ಆಗ್ರಹ! ಧರ್ಮಸಭಾ ಕಾರ್ಯಕ್ರಮದಲ್ಲಿ 3 ಲಕ್ಷ ಭಕ್ತಾದಿಗಳು! ರಾಮ ಜನ್ಮಭೂಮಿಯಲ್ಲೇ  ರಾಮ ಮಂದಿರ ನಿರ್ಮಾಣದ ಶಪಥ

ಅಯೋಧ್ಯೆ(ನ.25): ಅಯೋಧ್ಯೆಯಲ್ಲಿ ನಡೆದ ಧರ್ಮಸಭಾ ಕಾರ್ಯಕ್ರಮ ಅಂತ್ಯಗೊಂಡಿದ್ದು, ರಾಮ ಮಂದಿರ ನಿರ್ಮಾಣಕ್ಕಾಗಿ ಬೇಡಿಕೆಯನ್ನು ಮುಂದುವರೆಸಲು ವಿಶ್ವಹಿಂದೂ ಪರಿಷತ್ ನಿರ್ಧರಿಸಿದೆ. 

ಮಂತ್ರ ಘೋಷಗಳೊಂದಿಗೆ ಪ್ರಾರಂಭವಾದ ಧರ್ಮಸಭಾ ಕಾರ್ಯಕ್ರಮದಲ್ಲಿ 3 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು,  ರಾಮ ಜನ್ಮಭೂಮಿಯಲ್ಲೇ  ರಾಮ ಮಂದಿರ ನಿರ್ಮಾಣವಾಗಬೇಕೆಂಬ ಪಟ್ಟನ್ನು ಮುಂದುವರೆಸಲು ವಿಶ್ವಹಿಂದೂ ಪರಿಷತ್ ನಿರ್ಧರಿಸಿದೆ.

ಇನ್ನು ಧರ್ಮಸಭಾದಲ್ಲಿ ಪಾಲ್ಗೊಂಡಿದ್ದ ಶಿವಸೇನೆ ಕೂಡ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಆಗ್ರಹಿಸಿದೆ. ನಿನ್ನೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪರಿವಾರ ಸಮೇತ ಅಯೋಧ್ಯೆಯಲ್ಲಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?