ಅಯೋಧ್ಯೆ ವಿವಾದ: ವಿಚಾರಣೆಗೆ ಕೊನೆಗೂ ಡೆಡ್ ಲೈನ್ ಫಿಕ್ಸ್ ಮಾಡಿದ ಸುಪ್ರೀಂ!

Published : Sep 18, 2019, 01:34 PM IST
ಅಯೋಧ್ಯೆ ವಿವಾದ: ವಿಚಾರಣೆಗೆ ಕೊನೆಗೂ ಡೆಡ್ ಲೈನ್ ಫಿಕ್ಸ್ ಮಾಡಿದ ಸುಪ್ರೀಂ!

ಸಾರಾಂಶ

ಅಯೋಧ್ಯೆ ವಿವಾದ, ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಡೆಡ್‌ಲೈನ್ ಫಿಕ್ಸ್| ವಿಚಾರಣೆ ಪೂರ್ಣಗೊಂಡರೆ ಡಿಸೆಂಬರ್‌ನೊಳಗೆ ತೀರ್ಪು| ಐತಿಹಾಸಿಕ ತೀರ್ಪಿಗೆ ದಿನಗಣನೆ

ನವದೆಹಲಿ[ಸೆ.18]: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ತರ ಆದೇಶವೊಂದನ್ನು ಹೊರಡಿಸಿದೆ. ಕಕ್ಷಿದಾರರು ತಮ್ಮೆಲ್ಲಾ ವಾದ-ಪ್ರತಿವಾದಗಳನ್ನು ಮಂಡಿಸಲು ಸುಪ್ರೀಂ ಕೋರ್ಟ್ ಸಿಜೆಐ ರಂಜನ್ ಗೊಗೋಯ್ ಅಂತಿಮ ಗಡುವು ವಿಧಿಸಿದ್ದಾರೆ. ಈ ಮೂಲಕ ಡಿಸೆಂಬರ್ ತಿಂಗಳಿನೊಳಗೆ ತೀರ್ಪು ಬರುವುದು ಬಹುತೇಕ ಖಚಿತವಾಗಿದೆ.

ಅಯೋಧ್ಯೆ ಪ್ರಕರಣ ಸಂಬಂಧ ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ ನಡೆಸುತ್ತಿದ್ದು, ಇದು 26ನೇ ದಿನ ತಲುಪಿದೆ. ಹೀಗಿರುವಾಗ ರಾಮಜನ್ಮ ಭೂಮಿ ಹಾಗು ಬಾಬ್ರಿ ಮಸೀದಿ ಭೂ ವಿವಾದದ ವಿಚಾರಣೆ ಅಕ್ಟೋಬರ್ 18ರೊಳಗೆ ಮುಕ್ತಾಯಗೊಳಿಸಲೇಬೇಕು. ಇದಕ್ಕಾಗಿ ಪ್ರತಿದಿನ ಒಂದು ಗಂಟೆ ಹೆಚ್ಚು ಸಮಯ ವಿಚಾರಣೆ ನಡೆಸಲು ಸಿದ್ಧ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಮಧ್ಯಸ್ಥಿಕೆ ಮೂಲಕ ಅತ್ಯರ್ಥಪಡಿಸಕೊಳ್ಳಬಹುದು ಎಂದು ಸುಪ್ರೀಂ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ತಿಳಿಸಿದ್ದಾರೆ.

ಸುಪ್ರೀಂ ಸಿಜೆಐ ಆದೇಶದನ್ವಯ ಅಕ್ಟೋಬರ್ 18ರೊಳಗೆ ಈ ವಿಚಾರಣೆ ಪೂರ್ಣಗೊಂಡಿದ್ದೇ ಆದಲ್ಲಿ 2019ರ ಡಿಸೆಂಬರ್ ತಿಂಗಳಿನೊಳಗೆ ತೀರ್ಪು ಸಿಗಲಿದೆ. ಅಲ್ಲದೇ ಈ ಪ್ರಕರಣಕ್ಕೊಂದು ತಾರ್ಕಿಕ ಅಂತ್ಯ ಸಿಗಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!
19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು: ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ