
ನವದೆಹಲಿ (ನ.20): ಅಯೋಧ್ಯಾ ರಾಮಮಂದಿರ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಅಯೋಧ್ಯೆಯಲ್ಲೇ ರಾಮಮಂದಿರ ನಿರ್ಮಾಣ ಮಾಡಿ. ಜೊತೆಯಲ್ಲೇ ಲಕ್ನೋನಲ್ಲಿ ಮಸೀದಿ ನಿರ್ಮಾಣ ಮಾಡಿ ಎಂದು ಬಾಬ್ರಿ ಮಸೀದಿ ವಿವಾದಕ್ಕೆ ಶಿಯಾ ಬೋರ್ಡ್ ಸಂಧಾನ ಸೂತ್ರ ಹೇಳಿದೆ.
ದೇಶದಲ್ಲಿ ಶಾಂತಿ ಹಾಗೂ ಭ್ರಾತೃತ್ವ ಭಾವನೆ ಮೂಡಬೇಕು. ಹಲವು ರಾಜಕೀಯ ಪಕ್ಷಗಳು, ಮುಖಂಡರ ಜೊತೆ ಚರ್ಚಿಸಿ ನಿರ್ಣಯ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ಸಯೀದ್ ವಸೀಮ್ ರಿಜ್ವಿ ಹೇಳಿದ್ದಾರೆ.
ಡಿಸೆಂಬರ್ 5ರಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಲಿದೆ ಅಂತಿಮ ವಿಚಾರಣೆ ನಡೆಯಲಿದೆ.
ಮುಸ್ಲಿಂ ಬಾಹುಳ್ಯವಿರುವ ಪ್ರದೇಶದಲ್ಲಿ ಮಸೀದಿ ನಿರ್ಮಿಸಿ ಎಂದು ಆ. 2017 ರಲ್ಲೇ ಸುಪ್ರೀಂ ಕೋರ್ಟ್ಗೆ ಶಿಯಾ ಬೋರ್ಡ್ ಹೇಳಿಕೆ ನೀಡಿತ್ತು. ಈ ಸಂಬಂಧ ಶ್ರೀ ಶ್ರೀ ರವಿಶಂಕರ್ ಗುರೂಜಿ ಜೊತೆಗೂ ಮುಸ್ಲಿಂ ಮುಖಂಡರ ಚರ್ಚೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.