ನಾಳೆ ಅಯೋಧ್ಯೆ ತೀರ್ಪು: ದೇಶಾದ್ಯಂತ ಕಟ್ಟೆಚ್ಚರ!

By Web DeskFirst Published Nov 8, 2019, 9:13 PM IST
Highlights

ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದ ಅತ್ಯಂತ ಕುತೂಹಲಕಾರಿ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪು ನಾಳೆ(ನ.09) ಪ್ರಕಟವಾಗಲಿದೆ.

ನವದೆಹಲಿ(ನ.08): ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶದ ಅತ್ಯಂತ ಕುತೂಹಲಕಾರಿ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದದ ತೀರ್ಪು ನಾಳೆ(ನ.09) ಪ್ರಕಟವಾಗಲಿದೆ.

ಕೊನೆಗೂ ಮುಗೀತು ವಿಚಾರಣೆ: ಅಯೋಧ್ಯೆ ತೀರ್ಪಿಗೆ ದಿನಗಣನೆ!

ಈ ಕುರಿತು ಮಾಹಿತಿ ನೀಡಿರುವ ಸುಪ್ರೀಂಕೋರ್ಟ್ ಪಂಚಪೀಠ, ನಾಳೆ(ನ.09) ಬೆಳಗ್ಗೆ 10-30ಕ್ಕೆ ಅಯೋಧ್ಯೆ ತೀರ್ಪು ಪ್ರಕಟಿಸಲಿರುವುದಾಗಿ ಘೋಷಣೆ ಮಾಡಿದೆ.

ಅಯೋಧ್ಯೆ ತೀರ್ಪು: ವಾಟ್ಸಪ್, ಟ್ವಿಟ್ಟರ್ ಮೇಲೆ ಸರ್ಕಾರದ ನಿಯಂತ್ರಣ!

ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಮುಂದಿನ ವಾರದಲ್ಲಿ ಪ್ರಕಟಿಸಲಿದೆ ಎಂದು ಭಾವಿಸಲಾಗಿತ್ತಾದರೂ, ನಾಳೆಯೇ ತೀರ್ಪು ಪ್ರಕಟಿಸುವುದಾಗಿ ಪಂಚಪೀಠ ಸ್ಪಷ್ಟಪಡಿಸಿದೆ.

Supreme Court to deliver verdict on Ayodhya matter tomorrow. pic.twitter.com/mfb3hzTNSq

— ANI (@ANI)

ಇನ್ನು ನಾಳೆ ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತೀವ್ರ ಕಟ್ಟೆಚ್ಚರಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದ್ದು,  ಎಲ್ಲಾ ರಾಜ್ಯ ಸರ್ಕಾರಗಳಿಗೂ ಕಟ್ಟುನಿಟ್ಟಿನ  ಸೂಚನೆ ನೀಡಿದೆ. 

"

ರಾಮ ಜನ್ಮಭೂಮಿಯಲ್ಲಿ ಭಾರಿ ಕಟ್ಟೆಚ್ಚರ; ಸಂಭ್ರಮಾಚರಣೆ ನಿಷೇಧ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚಪೀಠ  ನಾಳೆ ಬೆಳಗ್ಗೆ 10-30ಗೆ ತೀರ್ಪು ಪ್ರಕಟಿಸಲಿದೆ. 

ಬರಲಿದೆ ಅಯೋಧ್ಯೆ ಆದೇಶ: ಸ್ವಪಕ್ಷೀಯರಿಗೆ ಮೋದಿ ಕೊಟ್ಟ ಸಂದೇಶ?

ಗೊಗೊಯ್ ನೇತೃತ್ವದ ಪಂಚಪೀಠದಲ್ಲಿ ಎಸ್. ಎ. ಬೊಬ್ಡೆ, DY ಚಂದ್ರಚೂಡ್, ಅಶೋಕ್ ಭೂಷಣ ಹಾಗೂ ಎಸ್.ಎ ನಜೀರ್ ಇರಲಿದ್ದಾರೆ. 

ಸೋಶಿಯಲ್ ಮಿಡಿಯಾ ಬಳಕೆದಾರರು ಗಮನಿಸಿ: ಅಯೋಧ್ಯೆ ರೂಲ್ಸ್ ಒಮ್ಮೆ ವಿಚಾರಿಸಿ!

click me!