ಡಿ.30ರವರೆಗೆ ಶಬರಿಮಲೆ ಅಯ್ಯಪ್ಪ ದೇಗುಲ ಬಂದ್

Published : Dec 27, 2017, 08:10 AM ISTUpdated : Apr 11, 2018, 01:10 PM IST
ಡಿ.30ರವರೆಗೆ ಶಬರಿಮಲೆ ಅಯ್ಯಪ್ಪ ದೇಗುಲ ಬಂದ್

ಸಾರಾಂಶ

ಪ್ರಸಿದ್ಧ ಅಯ್ಯಪ್ಪ ದೇವಸ್ಥಾನದಲ್ಲಿ ‘ಮಂಡಲ ಪೂಜೆ’ ಉತ್ಸವದ ಪ್ರಯುಕ್ತ ಮಂಗಳವಾರ ಸಾವಿರಾರು ಭಕ್ತರು ಆಗಮಿಸಿ, ಪ್ರಾರ್ಥನೆ ಸಲ್ಲಿಸಿದರು.

ಶಬರಿಮಲೆ (ಡಿ.27): ಪ್ರಸಿದ್ಧ ಅಯ್ಯಪ್ಪ ದೇವಸ್ಥಾನದಲ್ಲಿ ‘ಮಂಡಲ ಪೂಜೆ’ ಉತ್ಸವದ ಪ್ರಯುಕ್ತ ಮಂಗಳವಾರ ಸಾವಿರಾರು ಭಕ್ತರು ಆಗಮಿಸಿ, ಪ್ರಾರ್ಥನೆ ಸಲ್ಲಿಸಿದರು.

3 ತಿಂಗಳ ಅವಧಿಯ ವಾರ್ಷಿಕ ಯಾತ್ರೆ ಸಲುವಾಗಿ ಆರಂಭಿಕ ಹಂತದ ಕೊನೆಯ ದಿನ ಸಾವಿರಾರು ಜನ ಆಗಮಿಸಿದ್ದರು. ಪೂಜೆ ಪೂರ್ತಿಗೊಂಡ ಬಳಿಕ ದೇವಸ್ಥಾನ ಶನಿವಾರ (ಡಿ.30) ಸಂಜೆ ವರೆಗೆ ಮುಚ್ಚಲ್ಪಟ್ಟಿತು.

ಜ.14ರಂದು ನಡೆಯುವ ಮಕರ ಜ್ಯೋತಿ ಉತ್ಸವಕ್ಕಾಗಿ, ಶನಿವಾರ ಸಂಜೆ ಮತ್ತೆ ದೇವಸ್ಥಾನದ ಬಾಗಿಲು ತೆರೆಯಲಿದೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂದು ಪಠಿಸುತ್ತಾ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!