
ಲಖನೌ[ಜು.15]: ಭೂ ಕಬಳಿಕೆಗೆ ಕುಖ್ಯಾತಿ ಹೊಂದಿರುವ ಉತ್ತರಪ್ರದೇಶದ ರಾಂಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದ ಆಜಂ ಖಾನ್ ಹೆಸರು, ಶೀಘ್ರವೇ ಭೂ ಮಾಫಿಯಾಗಾರರ ಪಟ್ಟಿಸೇರುವ ಸಾಧ್ಯತೆ ಇದೆ.
ಯುಪಿ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ಬಳಿಕ, ಭೂ ಮಾಫಿಯಾ ಕುರಿತು ಜನತೆ ದೂರು ಸಲ್ಲಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಭೂ ಮಾಫಿಯಾ ನಡೆಸುವವರ ಪಟ್ಟಿಬಿಡುಗಡೆ ಮಾಡಲು ನಿರ್ಧರಿಸಿದ್ದರು. ಇದೀಗ ಆ ಪಟ್ಟಿಯಲ್ಲಿ ಆಜಂ ಖಾನ್ ಹೆಸರು ಸೇರಿಸಲು ರಾಂಪುರ ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಪೊಲೀಸರ ವರದಿ ಪ್ರಕಾರ ಆಜಂಖಾನ್ ಮೇಲೆ ಭೂ ಮಾಫಿಯಾದ 30 ಪ್ರಕರಣ ಇವೆ. ಸರ್ಕಾರಿ ಇಲ್ಲವೇ ರೈತರ ಜಮೀನುಗಳನ್ನು ಒತ್ತಾಯಪೂರ್ವಕವಾಗಿ, ಇಲ್ಲವೇ ಬೆದರಿಸಿ, ಇಲ್ಲವೇ ಖೊಟ್ಟಿದಾಖಲೆಗಳನ್ನು ಸೃಷ್ಠಿಸುವ ಮೂಲಕ ತಮ್ಮ ಹೆಸರಿಗೆ ಬರೆದುಕೊಂಡ ಆರೋಪ ಇವೆ.
2012-17ರಲ್ಲಿ ಉತ್ತರಪ್ರದೇಶದ ಕ್ಯಾಬಿನೆಟ್ ಸಚಿವರಾಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡು 26 ಬಡ ರೈತರಿಂದ ಸುಮಾರು 5000 ಹೆಕ್ಟೇರ್ ಭೂಮಿ ವಶಕ್ಕೆ ಪಡೆದುಕೊಂಡಿದ್ದು ಅಲ್ಲಿ ಬಹುಕೋಟಿ ಮೌಲ್ಯದ ಮೊಹಮ್ಮದ್ ಅಲಿ ಜೌಹಾರ್ ವಿವಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಆ ರೈತರು ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.