ಎಚ್'ಸಿಏ ಚುನಾವಣೆ: ಹೈಕೋರ್ಟ್ ಮೊರೆ ಹೋದ ಅಜರ್

Published : Jan 17, 2017, 12:28 PM ISTUpdated : Apr 11, 2018, 01:11 PM IST
ಎಚ್'ಸಿಏ ಚುನಾವಣೆ: ಹೈಕೋರ್ಟ್ ಮೊರೆ ಹೋದ ಅಜರ್

ಸಾರಾಂಶ

ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧವನ್ನು ಹಿಂಪಡೆದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲವೆಂಬ ಕಾರಣಕ್ಕಾಗಿ ಅಜರ್ ನಾಮಪತ್ರ ತಿರಸ್ಕೃತಗೊಂಡಿತ್ತು.

 

ಹೈದರಾಬಾದ್ (ಜ.17): ಹೈದರಾಬಾದ್ ಕ್ರಿಕೆಟ್ ಸಂಸ್ಥೆ (ಎಚ್‌’ಸಿಎ) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದ್ದರೂ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಜೀವ ನಿಷೇಧವನ್ನು ಹಿಂಪಡೆದಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಿಲ್ಲವೆಂಬ ಕಾರಣಕ್ಕಾಗಿ ಅಜರ್ ನಾಮಪತ್ರ ತಿರಸ್ಕೃತಗೊಂಡಿತ್ತು.

ಅಜರ್ ಈ ಕುರಿತಂತೆ  ಪತ್ರ ಬರೆದು ಕೋರಿದರೂ, ಬಿಸಿಸಿಐನಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ ಎನ್ನಲಾಗಿದೆ.

2000ದ ದ.ಆಫ್ರಿಕಾ ವಿರುದ್ಧದ ಸರಣಿಯ ವೇಳೆ ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಅಜರ್ ಬಿಸಿಸಿಐನಿಂದ ಆಜೀವ ನಿಷೇಧಕ್ಕೆ ಗುರಿಯಾಗಿದ್ದರು. 1992, 1996, 1999ರ ವಿಶ್ವಕಪ್‌ನಲ್ಲಿ ಅಜರ್ ಭಾರತವನ್ನು ಮುನ್ನಡೆಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನದ ತಿರುಪತಿಹಳ್ಳಿ ಬೆಟ್ಟದ ಮೇಲೆ 50ಕ್ಕೂ ಅಧಿಕ ಉಲ್ಕೆಗಳ ಸುರಿಮಳೆ!
India Latest News Live: ಪಹಲ್ಗಾಂ ಉಗ್ರ ದಾಳಿ: ಕೋರ್ಟ್‌ಗೆ 1597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ