ಯಾವನ್ರೀ ಆ ಸುರೇಶ್? ಬಿಎಸ್‌ವೈ ಗುಡುಗು

Published : Sep 11, 2018, 01:35 PM ISTUpdated : Sep 19, 2018, 09:22 AM IST
ಯಾವನ್ರೀ ಆ ಸುರೇಶ್? ಬಿಎಸ್‌ವೈ ಗುಡುಗು

ಸಾರಾಂಶ

ಡಿ ಕೆ ಸುರೇಶ್ ಆರೋಪಕ್ಕೆ ಬಿಎಸ್‌ವೈ ಪ್ರತ್ಯುತ್ತರ | ಆದಾಯ ತೆರಿಗೆ ಇಲಾಖೆಗೆ ನಾನು ಯಾವುದೇ ಪತ್ರ ಬರೆದಿಲ್ಲ ಎಂದು ಸ್ಪಷ್ಟನೆ | ಡಿ.ಕೆ.ಸುರೇಶ್ ಸೃಷ್ಟಿ ಮಾಡಿರುವ ನಕಲಿ ಪತ್ರ ಎಂದು ತಿರುಗೇಟು 

ಬೆಂಗಳೂರು (ಸೆ. 11): ಆದಾಯ ತೆರಿಗೆ ಇಲಾಖೆಗೆ ನಾನು ಯಾವುದೇ ಪತ್ರ ಬರೆದಿಲ್ಲ. ಸಂಸದ ಡಿ.ಕೆ.ಸುರೇಶ್ ಸೃಷ್ಟಿ ಮಾಡಿರುವ ನಕಲಿ ಪತ್ರ ಅದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವನು ಆ ಸುರೇಶ್? ನಾನು ಯಾಕೆ ಆತನಿಗೆ ಉತ್ತರ ಕೊಡಬೇಕು? ಪತ್ರ ವಿಚಾರವೆಲ್ಲಾ ಆತನೇ ಸೃಷ್ಟಿಸಿದ್ದಾನೆ. ದುರುದ್ದೇಶದಿಂದ ಕೂಡಿರುವ ಹೇಳಿಕೆ ಅದಾಗಿದೆ ಎಂದು ಕಿಡಿಕಾರಿದರು.

2017 ರ ಜನವರಿಯಲ್ಲಿ ಬರೆದ ಪತ್ರ ಆಗಿದ್ದರೆ ಇಷ್ಟು ದಿನ ಏನು ಮಾಡುತ್ತಿದ್ದರು. ಅವರ ಹೇಳಿಕೆಗೆ ಉತ್ತರ ನೀಡಬೇಕಾದ ಅಗತ್ಯ ಇಲ್ಲ. ಅದೊಂದು ನಕಲಿ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ನಕಲಿ ಮಾಡಿ ಬಿಡುಗಡೆ ಮಾಡಿದ್ದರು. ಅದು ಸುರೇಶ್ ಚಾಳಿ. ಕೇವಲ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸುರೇಶ್ ಆರೋಪಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ