ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿಗೆ ಮತ್ತೆ ಸಂಕಷ್ಟ..?

Published : Apr 06, 2017, 10:01 AM ISTUpdated : Apr 11, 2018, 01:06 PM IST
ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿಗೆ ಮತ್ತೆ ಸಂಕಷ್ಟ..?

ಸಾರಾಂಶ

ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ್ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ವಿಶ್ವ ಹಿಂದೂ ಪರಿಷತ್'ನ ಸಾಕಷ್ಟು ಕಾರ್ಯಕರ್ತರು ಬಾಬ್ರಿ ಮಸೀದಿ ದ್ವಂಸದ ಆರೋಪ ಎದುರಿಸುತ್ತಿದ್ದಾರೆ.

ನವದೆಹಲಿ(ಏ.06): ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾರೀ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಸೇರಿದಂತೆ ಇತರ 12 ಮಂದಿಯ ವಿಚಾರಣೆ ನಡೆಸಬೇಕು ಎಂದು ಕೇಂದ್ರೀಯ ತನಿಖಾ ದಳ ಸುಪ್ರೀಂ ಕೋರ್ಟ್'ಗೆ ಮನವಿ ಮಾಡಿದೆ. ಕಳೆದ ತಿಂಗಳು ಸುಪ್ರೀಂಕೋರ್ಟ್ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ಅಡ್ವಾಣಿ ಹಾಗೂ ಇತರರ ವಿರುದ್ಧ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಲಖನೌ ಕೋರ್ಟ್'ನಲ್ಲಿ ಅವರನ್ನು ವಿಚಾರಣೆಗೊಳಪಡಿಸಬೇಕು ಎಂದು ಸಿಬಿಐ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಶತಮಾನಗಳಷ್ಟು ಹಳೆಯದಾದ ಬಾಬ್ರಿ ಮಸೀದಿಯನ್ನು 1992ರಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಹಾರೆ, ಗುದ್ದಲಿ, ಸುತ್ತಿಗೆ, ಪಿಕಾಸಿಗಳ ಸಹಾಯದಿಂದ ಧ್ವಂಸಗೊಳಿಸಿದ್ದರು. ಇದಾದ ನಂತರದ ಕೋಮು ಸಂಘರ್ಷದಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಮಂದಿಯ ಪ್ರಾಣಹಾನಿ ಉಂಟಾಗಿತ್ತು. ಬಾಬ್ರಿ ಮಸೀದಿ ಧ್ವಂಸವು ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವೆ ಕೋಮು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ರಾಮ ಜನ್ಮಭೂಮಿಯಲ್ಲಿ ದೇವಸ್ಥಾನವನ್ನು ನೆಲಸಮ ಮಾಡಿ ಮೊಘಲ್ ದೊರೆ ಬಾಬರ್ ಮಸೀದಿ ನಿರ್ಮಿಸಿದ್ದಾನೆ ಎಂದು ಹಿಂದೂ ಕಾರ್ಯಕರ್ತರು ವಿಧ್ವಂಸಕ ಕೃತ್ಯ ನಡೆಸಿದ್ದರು.

ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ್ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ವಿಶ್ವ ಹಿಂದೂ ಪರಿಷತ್'ನ ಸಾಕಷ್ಟು ಕಾರ್ಯಕರ್ತರು ಬಾಬ್ರಿ ಮಸೀದಿ ದ್ವಂಸದ ಆರೋಪ ಎದುರಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ
ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ: ಕೇಂದ್ರ ಸಚಿವ ಕುಮಾರಸ್ವಾಮಿ