
ಬೆಂಗಳೂರು : ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಸವರಾಜು ಹಾಗೂ ವೆಂಕಮ್ಮ ದಂಪತಿಯ ಮಗು ವೆಂಕಟೇಶನನ್ನು ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಈರಣ್ಣ ಎಂಬಾತ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ.
2 ದಿನಗಳ ಹಿಂದೆಯಷ್ಟೇ ಈರಣ್ಣ ಹಾಗೂ ಬಸವರಾಜು ಕುಟುಂಬಕ್ಕೆ ನಾಯಿಗೆ ಹಾಲು ಹಾಕುವ ಬಟ್ಟಲಿನ ವಿಚಾರವಾಗಿ ಜಗಳ ನಡೆದಿತ್ತು. ಈ ಜಗಳದ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿರಬಹುದು ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಮಗುವಿನ ಕುತ್ತಿಗೆಯನ್ನು ತುಳಿದು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.