ರಾಜ್ಯದ ರೈತರಿಗೆ ಈಗ ಬಗರ್‌ಹುಕುಂ ಭಾಗ್ಯ!

Published : Feb 23, 2018, 07:46 AM ISTUpdated : Apr 11, 2018, 12:38 PM IST
ರಾಜ್ಯದ ರೈತರಿಗೆ ಈಗ ಬಗರ್‌ಹುಕುಂ ಭಾಗ್ಯ!

ಸಾರಾಂಶ

ರಾಜ್ಯದಲ್ಲಿ 2005ವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ’ಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ 2005ವರೆಗೆ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಿ ಭೂ ಮಂಜೂರು ಮಾಡಲು ಅವಕಾಶ ಕಲ್ಪಿಸುವ ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ’ಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ವಿಧಾನಪರಿಷತ್ತಿನಲ್ಲಿ ಕೂಡ ಇದು ಅಂಗೀಕಾರವಾದರೆ ಕಾನೂನಿನ ರೂಪ ದೊರಕಲಿದೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ಕ್ಕೆ ತಿದ್ದುಪಡಿ ತರುವ ಸಂಬಂಧ ತಿದ್ದುಪಡಿ ವಿಧೇಯಕವನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಂಡಿಸಿದರು. ತಿದ್ದುಪಡಿ ವಿಧೇಯಕದ ಅನ್ವಯ 14-04-1990ರಿಂದ 2005ರ ಅಂತ್ಯದವರೆಗಿನ ಸಾಗುವಳಿ ಮಾಡುತ್ತಿದ್ದವರು ಬಗರ್‌ಹುಕುಂ ಪ್ರಕರಣಗಳು ಸಕ್ರಮಗೊಳ್ಳಲಿವೆ, ಈ ಸಂಬಂಧ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ನೀಡಲಾಗುವುದು ಎಂದರು.

ಈ ಹಿಂದೆ ಸರ್ಕಾರಿ ಜಮೀನನ್ನು ಸಾಗುವಳಿ ಮಾಡುತ್ತಿದ್ದ ಭೂ ಹೀನರಿಗೆ ಬಗರ್‌ಹುಕುಂ ಸಾಗುವಳಿ ಜಮೀನು ಸಕ್ರಮಗೊಳಿಸಿ ಮಂಜೂರು ಮಾಡಲಾಗಿತ್ತು. ಈ ವೇಳೆ ಸರ್ಕಾರಿ ಜಮೀನನ್ನು 14-04-1990ರವರೆಗೆ ಸಾಗುವಳಿ ಮಾಡುತ್ತಿದ್ದ ಸಾರ್ವಜನಿಕರು ಮಾತ್ರ ಅರ್ಜಿ ಸಲ್ಲಿಸಲು ಷರತ್ತು ವಿಧಿಸಲಾಗಿತ್ತು. ಇದರಿಂದ ಸಾಕಷ್ಟುಮಂದಿ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಜತೆಗೆ 1990ರ ನಂತರ ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿದ್ದ ಅನೇಕ ಭೂ ರಹಿತರಿಗೆ ಭೂ ಮಂಜೂರು ಆಗುತ್ತಿಲ್ಲ. ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ 2005ರವರೆಗೂ ವಿಸ್ತರಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು